ಬೆಂಗಳೂರಲ್ಲಿ ಎಮ್ ಎಸ್ ಧೋನಿ ಕಠಿಣ ಅಭ್ಯಾಸ

Published : Jun 19, 2018, 01:20 PM IST
ಬೆಂಗಳೂರಲ್ಲಿ ಎಮ್ ಎಸ್ ಧೋನಿ ಕಠಿಣ ಅಭ್ಯಾಸ

ಸಾರಾಂಶ

ಇಂಗ್ಲೆಂಡ್ ವಿರುದ್ಧದ ಸರಣಿಗಾಗಿ ಟೀಮ್ಇಂಡಿಯಾ ಕ್ರಿಕೆಟಿಗ ಎಮ್ ಎಸ್ ಧೋನಿ ಕಠಿಣ ಅಭ್ಯಾಸ ಆರಂಭಿಸಿದ್ದಾರೆ. ಬೌನ್ಸಿ ಪಿಚ್‌ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲು ಎಮ್ ಎಸ್ ಧೋನಿ ಬೆಂಗಳೂರಿಗೆ ಆಗಮಿಸಿದ್ದಾರೆ. ಇಲ್ಲಿನ ಎನ್‌ಸಿಎನಲ್ಲಿ ಅಭ್ಯಾಸ ಮಾಡಿರುವ ಧೋನಿಗೆ ಕರ್ನಾಟಕದ ಯುವ ಬೌಲರ್‌ಗಳು ಬೌಲಿಂಗ್ ಮಾಡುತ್ತಿದ್ದಾರೆ.

ಬೆಂಗಳೂರು(ಜೂ.19): ಇದೇ ತಿಂಗಳ ಅಂತ್ಯದಲ್ಲಿ ಐರ್ಲೆಂಡ್ ವಿರುದ್ಧ ಟಿ20 ಸರಣಿ ಆಡಲಿರುವ ಭಾರತ, ಬಳಿಕ ಇಂಗ್ಲೆಂಡ್‌ಗೆ ತೆರಳಲಿದೆ. ಅಲ್ಲಿನ ಟಿ20 ಹಾಗೂ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿರುವ ಭಾರತ ತಂಡದ ಮಾಜಿ ನಾಯಕ, ವಿಕೆಟ್ ಕೀಪರ್ ಎಂ.ಎಸ್.ಧೋನಿ ಪ್ರವಾಸಕ್ಕಾಗಿ ಕಠಿಣ ಅಭ್ಯಾಸ ಆರಂಭಿಸಿದ್ದಾರೆ.

ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ)ಯಲ್ಲಿ ಸೋಮವಾರ ಪ್ರತ್ಯೇಕವಾಗಿ ಅಭ್ಯಾಸ ನಡೆಸಿದರು. ಜೂ.15 ರಂದು ಯೋ-ಯೋ ಫಿಟ್ನೆಸ್ ಟೆಸ್ಟ್‌ಗೆ ಒಳಗಾಗಿದ್ದ ಧೋನಿ, ಬೆಂಗಳೂರಲ್ಲೇ ಉಳಿದಿದ್ದರು. ಸೋಮವಾರ ಬೆಳಗ್ಗೆ ನೆಟ್ಸ್‌ಗೆ ಆಗಮಿಸಿದ ಧೋನಿಗೆ ಭಾರತ ತಂಡದ ಸಹಾಯಕ ಸಿಬ್ಬಂದಿ ರಾಘವೇಂದ್ರ, ಥ್ರೋ ಡೌನ್ಸ್ (ಚೆಂಡು ಎಸೆಯುವುದು) ನೀಡಿದರು. ಸುಮಾರು ಎರಡೂವರೆ ಗಂಟೆಗಳ ಕಾಲ ಅಭ್ಯಾಸದಲ್ಲಿ ತೊಡಗಿದ ಧೋನಿಗೆ ಭಾರತ ತಂಡದ ವೇಗಿಗಳಾದ ಶಾರ್ದೂಲ್ ಠಾಕೂರ್ ಹಾಗೂ ಸಿದ್ಧಾರ್ಥ್ ಕೌಲ್ ಸಹ ಬೌಲ್ ಮಾಡಿದರು. 

18 ಯಾರ್ಡ್ ನಿಂದ ಥ್ರೋ ಡೌನ್‌ಗಳನ್ನು ಎದುರಿಸಿದ ಧೋನಿ, ಹೆಚ್ಚಾಗಿ ಶಾರ್ಟ್ ಪಿಚ್ ಎಸೆತಗಳಿಗೆ ಬ್ಯಾಟ್ ಬೀಸಿದರು. ಶಾರ್ದೂಲ್‌ಗೆ ಕಾಲ್ಪನಿಕವಾಗಿ ಫೀಲ್ಡರ್‌ಗಳನ್ನು ನಿಗದಿತ ಕ್ಷೇತ್ರಗಳಲ್ಲಿ ನಿಲ್ಲಿಸುವಂತೆ ಸೂಚಿಸಿ, ಅದಕ್ಕೆ ಅನುಗುಣವಾಗಿ ಧೋನಿ ಬ್ಯಾಟಿಂಗ್ ಮಾಡಿದರು. ಇಂಗ್ಲೆಂಡ್‌ನ ವೇಗ ಹಾಗೂ ಬೌನ್ಸಿ ಪಿಚ್ ಗಳಲ್ಲಿ ಆಡಲು ಧೋನಿ ಅಗತ್ಯ ತಯಾರಿ ನಡೆಸುತ್ತಿದ್ದು, 2019ರ ಏಕದಿನ ವಿಶ್ವಕಪ್ ಸಹ ಅಲ್ಲೇ ನಡೆಯಲಿರುವುದರಿಂದ ಮುಂದಿನ ತಿಂಗಳ ಪ್ರವಾಸ ಮಹತ್ವದೆನಿಸಿದೆ. ಮುಂದಿನ ವರ್ಷದ ವಿಶ್ವಕಪ್ ವರೆಗೂ ಧೋನಿ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳಬೇಕಿದ್ದರೆ, ಈ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ತೋರುವ ಅನಿವಾರ್ಯತೆ ಇದ್ದು, ಇದನ್ನು ಅರಿತಿರುವ ಧೋನಿ ಕಠಿಣ ಅಭ್ಯಾಸಕ್ಕೆ ಮುಂದಾಗಿದ್ದಾರೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಲೆಗೆ 20 ಹೊಲಿಗೆ, ಭುಜಕ್ಕೆ ಬಲವಾದ ಪೆಟ್ಟು! ಕ್ರಿಕೆಟ್ ತಂಡಕ್ಕೆ ಆಯ್ಕೆ ಮಾಡದ್ದಕ್ಕೆ ಕೋಚ್‌ ಮೇಲೆ ಆಟಗಾರರ ಮಾರಣಾಂತಿಕ ಹಲ್ಲೆ!
ಆ ಒಂದು ಫೋಟೋ: ಪಾಪರಾಜಿಗಳ ಮೇಲೆ ಹಾರ್ದಿಕ್ ಪಾಂಡ್ಯ ಕೆಂಡಾಮಂಡಲ!