
ರಾಂಚಿ(ಮಾ.06): ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3ನೇ ಏಕದಿನ ಪಂದ್ಯಕ್ಕೆ ರಾಂಚಿ ಕ್ರೀಡಾಂಗಣ ಆತಿಥ್ಯವಹಿಸಿದೆ. ಎಂ.ಎಸ್.ಧೋನಿ ಹುಟ್ಟೂರು ರಾಂಚಿಯಲ್ಲಿ ಅಭಿಮಾನಿಗಳ ಸಂಭ್ರಮ ಇಮ್ಮಡಿಯಾಗಿದೆ. ಪಂದ್ಯದ ದಿನ ಕ್ರೀಡಾಂಗಣದಲ್ಲಿ ಧೋನಿ ಪೆವಿಲಿಯನ್ ಉದ್ಘಾಟನೆ ಮಾಡಲು ಧೋನಿ ನಿರಾಕರಿಸಿದ್ದಾರೆ.
ಇದನ್ನೂ ಓದಿ: ರಾಂಚಿಗೆ ಬಂದಿಳಿದ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಧೋನಿ ನೀಡಿದ್ರು ಸರ್ಪ್ರೈಸ್!
ಜಾರ್ಖಂಡನ ಕ್ರಿಕೆಟ್ ಸಂಸ್ಥೆ ಕಳೆದ ವರ್ಷದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪೆವಿಲಿಯನ್ ಸ್ಟಾಂಡ್ಗೆ ಧೋನಿ ಪೆವಿಲಿಯನ್ ಹೆಸರಿಡು ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಇದೀಗ ಧೋನಿ ಪೆವಿಲಿಯನ್ ಸಜ್ಜಾಗಿದೆ. ಇನ್ನ ಆಸಿಸ್ ವಿರುದ್ಧದ 3ನೇ ಏಕದಿನದಲ್ಲಿ ಧೋನಿ ಕೈಯಿಂದಲೇ ಪೆವಿಲಿಯನ್ ಉದ್ಧಾಟಿಸಲು ನಿರ್ಧರಿಸಲಾಗಿತ್ತು. ಆದರೆ ಇದನ್ನ ಧೋನಿ ನಿರಾಕರಿಸಿದ್ದಾರೆ.
ಇದನ್ನೂ ಓದಿ: ತವರಿನಲ್ಲಿ ಹೊಸ ದಾಖಲೆ ನಿರ್ಮಿಸಲು ಸಜ್ಜಾದ ಧೋನಿ
ನನ್ನ ಮನೆಯಲ್ಲಿ ಉದ್ಘಾಟನೆ ಮಾಡಲು ಏನಿದೆ? ಎಂದು ಧೋನಿ ಹೇಳಿದ್ದಾರೆ. ಇದು ಶ್ರೇಷ್ಠ ಕ್ರಿಕೆಟಿಗನ ಸರಳತೆಯನ್ನ ಸೂಚಿಸುತ್ತದೆ ಎಂದು ಜಾರ್ಖಂಡ್ ಕ್ರಿಕೆಟ್ ಸಂಸ್ಥೆ ಕಾರ್ಯದರ್ಶಿ ದೇಬಸಿಸ್ ಚಕ್ರಬೊರ್ತಿ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.