ಧೋನಿಗೆ ನಾಯಕತ್ವದಿಂದ ಕೆಳಗಿಳಿಯುವಂತೆ ಒತ್ತಡ ಹೇರಿರಲಿಲ್ಲ

Published : Jan 10, 2017, 07:28 AM ISTUpdated : Apr 11, 2018, 01:05 PM IST
ಧೋನಿಗೆ ನಾಯಕತ್ವದಿಂದ ಕೆಳಗಿಳಿಯುವಂತೆ ಒತ್ತಡ ಹೇರಿರಲಿಲ್ಲ

ಸಾರಾಂಶ

ಧೋನಿಯ ನಾಯಕತ್ವದಲ್ಲಿ ಟಿ20 ವಿಶ್ವಕಪ್, ಏಕದಿನ ವಿಶ್ವಕಪ್ ಸೇರಿದಂತೆ ಬಹುತೇಕ ಟ್ರೋಫಿಗಳನ್ನು ಗೆದ್ದುಕೊಂಡಿದೆ.

ನವದೆಹಲಿ(ಜ.10): ಸೀಮಿತ ಒವರ್'ಗಳ ಟೀಂ ಇಂಡಿಯಾ ನಾಯಕತ್ವದಿಂದ ಕೆಳಗಿಳಿಯುವಂತೆ ಎಂ.ಎಸ್.ಧೋನಿಯ ಮೇಲೆ ಯಾವುದೇ ಒತ್ತಡ ಹೇರಿಲ್ಲ. ಇದು ಅವರ ವೈಯುಕ್ತಿಕ ನಿರ್ಧಾರ ಎಂದು ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್'ಕೆ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

ಕೆಲವು ಮಾಧ್ಯಮಗಳಲ್ಲಿ ಕಳೆದ ಸೆಪ್ಟೆಂಬರ್ ತಿಂಗಳಿನಿಂದಲೇ ಧೋನಿಯನ್ನು ನಾಯಕತ್ವದಿಂದ ಕಡ್ಡಾಯವಾಗಿ ಕೆಳಗಿಳಿಸಲಾಯಿತು ಎಂಬ ವರದಿಗಳಿಗೆ ಪ್ರತಿಕ್ರಿಯಿಸಿದ  ಪ್ರಸಾದ್, " ಜಾರ್ಖಂಡ್ ಮತ್ತು ಗುಜರಾತ್ ನಡುವಣದ ರಣಜಿ ಸೆಮಿಫೈನಲ್ ಪಂದ್ಯದ ವೇಳೆ ಸ್ವತಃ ಧೋನಿಯೇ ಈ ವಿಷಯವನ್ನು ನನ್ನಲ್ಲಿ ಹೇಳಿದರು" ಎಂದಿದ್ದಾರೆ.

ಧೋನಿಯ ನಾಯಕತ್ವದಲ್ಲಿ ಟಿ20 ವಿಶ್ವಕಪ್, ಏಕದಿನ ವಿಶ್ವಕಪ್ ಸೇರಿದಂತೆ ಬಹುತೇಕ ಟ್ರೋಫಿಗಳನ್ನು ಗೆದ್ದುಕೊಂಡಿದೆ. 2014ರಲ್ಲಿ ಟೆಸ್ಟ್ ನಾಯಕತ್ವ ಸ್ಥಾನದಿಂದ ಕೆಳಗಿಳಿದಿದ್ದ ಧೋನಿ ಈಗ ಟಿ20 ಹಾಗೂ ಏಕದಿನ ತಂಡದ ನಾಯಕತ್ವ ಸ್ಥಾನಕ್ಕೂ ರಾಜಿನಾಮೆ ಕೊಟ್ಟಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?