
ಮುಂಬೈ(ನ.26): ಮುಂಬೈ ಮೇಲೆ ಭಯೋತ್ವಾದಕರು ನಡೆಸಿದ ದಾಳಿಗೆ ಇಂದು 10 ವರ್ಷ ಸಂದಿದೆ. 166 ಜನ ಸಾವಿಗೀಡಾದರೆ, 300ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. 10 ಮಂದಿ ಲಷ್ಕರ್-ಎ-ತೊಯ್ಬಾ ಉಗ್ರರು ನಡೆಸಿದ ದಾಳಿ ಭಾರತೀಯರು ಯಾವತ್ತು ಮರೆಯಲ್ಲ.
ಸದಾ ಜನಜಂಗುಳಿಯಿಂದ ಗಿಜಿಗಿಡುವ ಜನಸಾಮಾನ್ಯರ ಚತ್ರಪತಿ ಶಿವಾಜಿ ಟರ್ಮಿನಸ್ ರೈಲು ನಿಲ್ದಾಣ, ತಾಜ್, ಒಬೆರಾಯ್, ನರಿಮಾನ್ ಪಾಯಿಂಟ್ ಸೇರಿದಂತೆ ಮುಂಬೈನ ಪ್ರಮುಖ ಸ್ಥಳಗಳ ಮೇಲೆ ಉಗ್ರರ ಬಾಂಬ್ ಹಾಗೂ ಗುಂಡಿನ ದಾಳಿಗೆ ಇಡೀ ಭಾರತವೇ ತತ್ತರಿಸಿತ್ತು.
ಉಗ್ರ ಅಜ್ಮಲ್ ಕಸಬ್ ಹಿಡಿದ ತುಕರಾಮ್ ಒಂಬ್ಳೆ ಸೇರಿದಂತೆ ಹಿರಿಯ ಹಾಗೂ ದಕ್ಷ ಪೊಲೀಸ್ ಅಧಿಕಾರಿಗಳು, ಯೋಧರು ಸೇರಿದಂತೆ ಹಲವರು ಹೋರಾಟದಲ್ಲಿ ಮಡಿದಿದ್ದಾರೆ. ಇದೀಗ ಈ ಭೀಕರ ದಾಳಿ, ಭಯೋತ್ವಾದಕರನ್ನ ಹೆಡೆಮುರಿ ಕಟ್ಟಿದ ಪೊಲೀಸರು, ಸೈನಿಕರು ಹಾಗೂ ಮಡಿದವ ಜನಸಾಮಾನ್ಯರನ್ನ ಟೀಂ ಇಂಡಿಯಾ ಕ್ರಿಕೆಟಿಗರು ಸ್ಮರಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.