
ನವದೆಹಲಿ(ಜ.03): ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ 2018ರ ಐಪಿಎಲ್'ಗೆ ನಾಯಕ ರೋಹಿತ್ ಶರ್ಮಾ ಹಾಗೂ ಪಾಂಡ್ಯ ಸಹೋದರರು (ಹಾರ್ದಿಕ್, ಕೃನಾಲ್)ರನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ ಎನ್ನಲಾಗಿದೆ.
ಇದೇ ವೇಳೆ ಡೆಲ್ಲಿ ಡೇರ್'ಡೆವಿಲ್ಸ್ ರಿಶಬ್ ಪಂತ್, ಶ್ರೇಯಸ್ ಅಯ್ಯರ್'ರನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಯಾವ ಆಟಗಾರರನ್ನು ಉಳಿಸಿಕೊಳ್ಳಲಿದ್ದೇವೆ ಎಂಬ ಪಟ್ಟಿಯನ್ನು ಸಲ್ಲಿಸಲು ತಂಡಗಳಿಗೆ ಜ.4 ಗಡುವಾಗಿದೆ. ಕೃನಾಲ್ ಇನ್ನೂ ಭಾರತ ಪರ ಆಡದಿರುವ ಕಾರಣ, ಅವರನ್ನು ಕೇವಲ ₹3 ಕೋಟಿಗೆ ಉಳಿಸಿಕೊಳ್ಳಬಹುದಾಗಿದೆ. ಇನ್ನು ಪೊಲ್ಲಾರ್ಡ್ ಹಾಗೂ ಬುಮ್ರಾ ಅವರನ್ನು ‘ರೈಟ್ ಟು ಮ್ಯಾಚ್’ ಬಳಸಿ ಖರೀದಿಸಲು ಮುಂಬೈ ತೀರ್ಮಾನಿಸಿದೆ ಎನ್ನಲಾಗಿದೆ.
ಇನ್ನು ಸಿಎಸ್'ಕೆ ಧೋನಿ ಹಾಗೂ ಸುರೇಶ್ ರೈನಾ ಅವರನ್ನು ಉಳಿಸಿಕೊಳ್ಳುವ ಇರಾದೆಯಲ್ಲಿದ್ದರೆ, ಹೈದರಾಬಾದ್ ಡೇವಿಡ್ ವಾರ್ನರ್ ಹಾಗೂ ಯುವ ಪ್ರತಿಭೆ ದೀಪಕ್ ಹೂಡಾ ಅವರ ಮೇಲೆ ಕಣ್ಣಿಟ್ಟಿದೆ ಎನ್ನಲಾಗಿದೆ. ಐಪಿಎಲ್ ಹರಾಜು ಪ್ರಕ್ರಿಯೆಯು ಬೆಂಗಳೂರಿನಲ್ಲಿ ಜನವರಿ 27&28ರಂದು ನಡೆಯಲಿದೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.