
ಮುಂಬೈ(ಏ.06): ಚೆನ್ನೈ ಸೂಪರ್'ಕಿಂಗ್ಸ್ ತಂಡದ ಪಾಲಾಗಿರುವ ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರ ಸೇವೆಯನ್ನು ಮುಂಬೈ ಇಂಡಿಯನ್ಸ್ ತಂಡ ಮಿಸ್ ಮಾಡಿಕೊಳ್ಳಲಿದೆ ಎಂದು ಮುಂಬೈ ತಂಡದ ಮೆಂಟರ್ ಅನಿಲ್ ಕುಂಬ್ಳೆ ಅಭಿಪ್ರಾಯಪಟ್ಟಿದ್ದಾರೆ.
ಐಪಿಎಲ್ ಮೊದಲ ಆವೃತ್ತಿಯಿಂದ ಹತ್ತನೇ ಆವೃತ್ತಿವರೆಗೆ ಮುಂಬೈ ತಂಡವನ್ನು ಪ್ರತಿನಿಧಿಸಿದ್ದ ಹರ್ಭಜನ್ ಸಿಂಗ್ ಇದೇ ಮೊದಲ ಬಾರಿಗೆ ಸಿಎಸ್'ಕೆ ಪರ ಭಜ್ಜಿ ಕಣಕ್ಕಿಳಿಯುತ್ತಿದ್ದಾರೆ. ಹರ್ಭಜನ್ ಅನುಪಸ್ಥಿತಿಯಲ್ಲಿ ಆಲ್ರೌಂಡರ್ ಕೃನಾಲ್ ಪಾಂಡ್ಯ ಸ್ಪಿನ್ ವಿಭಾಗವನ್ನು ಮುನ್ನಡೆಸಲಿದ್ದಾರೆ ಎಂದು ಕುಂಬ್ಳೆ ಹೇಳಿದ್ದಾರೆ.
ಇದೇವೇಳೆ ಜಸ್'ಪ್ರೀತ್ ಬುಮ್ರಾ ಹಾಗೂ ಮುಷ್ತಾಫಿಜುರ್ ರಹೀಮ್ ಡೆತ್ ಓವರ್'ಗಳಲ್ಲಿ ಮುಂಬೈ ಇಂಡಿಯನ್ಸ್ ಪರ ಈ ಬಾರಿ ಮಹತ್ವದ ಪಾತ್ರ ವಹಿಸಲಿದ್ದಾರೆ ಎಂದು ಕುಂಬ್ಳೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ನಾಳೆ(ಏ.07) ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್'ಕಿಂಗ್ಸ್ ತಂಡವನ್ನು ಎದುರಿಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.