
ಚೆನ್ನೈ[ಅ.05]: ಬಿಸಿಸಿಐ ಆಯ್ಕೆ ಸಮಿತಿ ವಿರುದ್ಧ ಕರುಣ್ ನಾಯರ್ ಅಸಮಾಧಾನ ತೋರಿದ ಬೆನ್ನಲ್ಲೇ ಭಾರತ ತಂಡದ ಮತ್ತೊಬ್ಬ ಕ್ರಿಕೆಟಿಗ ಮುರಳಿ ವಿಜಯ್ ಸಹ ಆಯ್ಕೆ ಸಮಿತಿ ತಮ್ಮ ಜತೆ ಸರಿಯಾದ ಸಂವಹನ ನಡೆಸಿಲ್ಲ ಎಂದು ಆರೋಪಿಸಿದ್ದಾರೆ.
ಇಂಗ್ಲೆಂಡ್ ವಿರುದ್ಧ ಸರಣಿಯ ಕೊನೆ 2 ಟೆಸ್ಟ್ಗಳಿಗೆ ವಿಜಯ್ರನ್ನು ಕೈಬಿಡಲಾಗಿತ್ತು. ಈ ಸಂಬಂಧ ಬುಧವಾರ ವಿಜಯ್ ಹಜಾರೆ ಪಂದ್ಯದ ವೇಳೆ ಮಾತನಾಡಿದ ವಿಜಯ್, ‘ನನ್ನನ್ನು ತಂಡದಿಂದ ಕೈಬಿಟ್ಟಿದ್ದಕ್ಕೆ ಆಯ್ಕೆಗಾರರು ಸೂಕ್ತ ಕಾರಣಗಳನ್ನು ನೀಡಿಲ್ಲ. ತಂಡದಿಂದ ಕೈಬಿಟ್ಟ ಬಳಿಕ ಈವರೆಗೂ ಯಾರೂ ನನ್ನನ್ನು ಸಂಪರ್ಕಿಸಿಲ್ಲ’ ಎಂದಿದ್ದಾರೆ.
ಇದನ್ನು ಓದಿ: ಕರುಣ್ ನಾಯರ್ಗೆ ಕೊಕ್-ನಾಯಕ ವಿರಾಟ್ ಕೊಹ್ಲಿ ಹೇಳಿದ್ದೇನು?
ವಿಜಯ್ ಹೇಳಿಕೆಗೆ ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್.ಕೆ.ಪ್ರಸಾದ್ ಅಚ್ಚರಿ ವ್ಯಕ್ತಪಡಿಸಿದ್ದು, ‘ಈ ಆರೋಪಗಳೆಲ್ಲಾ ಸುಳ್ಳು’ ಎಂದಿದ್ದಾರೆ. ವಿಜಯ್ ಆರೋಪಕ್ಕೆ ಬಿಸಿಸಿಐ ಅಧಿಕಾರಿಗಳು ಸಹ ಬೇಸರ ವ್ಯಕ್ತಪಡಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.