
ಮೈಸೂರು(ಅ.09): ನಾಡಹಬ್ಬ ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ರಾಜ್ಯ ದಸರಾ ಕ್ರೀಡಾಕೂಟ ಸಿಎಂ ಕಪ್ ಪಂದ್ಯಾವಳಿಯನ್ನು ಅ 9ರಿಂದ 16 ರವರೆಗೆ ಯೋಜಿಸಲಾಗಿದೆ. ಕೂಟದಲ್ಲಿ ಒಲಂಪಿಕ್ಸ್ನಲ್ಲಿ ಮಾನ್ಯತೆ ಪಡೆದ 24 ಕ್ರೀಡೆಗಳಲ್ಲಿ ಸ್ಪರ್ಧೆಗಳು ನಡೆಯಲಿವೆ.
ರೈಫಲ್ ಶೂಟಿಂಗ್ ಹೊರತುಪಡಿಸಿ ಉಳಿದ ಎಲ್ಲಾ 23 ಕ್ರೀಡೆಗಳನ್ನು ಮೈಸೂರಿನಲ್ಲಿ ಸಂಘಟಿಸಲಾಗುತ್ತಿದೆ. ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ಸಂಬಂಧಪಟ್ಟ ಕರ್ನಾಟಕ ರಾಜ್ಯ ಕ್ರೀಡಾ ಸಂಸ್ಥೆಗಳು ನೀಡಿದ ರಾಜ್ಯದ ಪ್ರತಿಷ್ಠಿತ 8 ತಂಡಗಳು, ಅಥ್ಲೀಟ್ ಗಳು ಸಂಬಂಧಪಟ್ಟ ಕ್ರೀಡೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಕ್ರೀಡಾ ಜ್ಯೋತಿಯು ಅ.10 ರಂದು ಬೆಳಗ್ಗೆ 10.30ಕ್ಕೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಉದ್ಘಾಟನೆಗೊಳ್ಳಲಿದೆ.
ಮುಖ್ಯಮಂತ್ರಿ ಎಚ್ .ಡಿ. ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವಜಿ.ಟಿ. ದೇವೇಗೌಡ, ಖ್ಯಾತ ಅಥ್ಲೀಟ್ ಎಂ.ಪಿ.
ಪೂವಮ್ಮ ಪಾಲ್ಗೊಳ್ಳುವರು. ಅ.16 ರಂದು ಸಂಜೆ 4ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ.
ವಸತಿ, ಊಟದ ವ್ಯವಸ್ಥೆ: ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ರಾಜ್ಯದ ಎಲ್ಲಾ ಜಿಲ್ಲೆಗಳ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳಿಗೆ ವಿವಿಧ ಹೊಟೇಲ್ಗಳಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಅ.9 ರಿಂದ 17 ರಂದು ಬೆಳಗಿನವರೆಗೆ ನಜರಾಜ ಬಹದ್ದೂರ್ ಛತ್ರದಲ್ಲಿ ಊಟೋಪಹಾರ ವ್ಯವಸ್ಥೆ ಕಲ್ಪಿಸಲಾಗಿದೆ.
ವಸತಿ ಸ್ಥಳದಿಂದ ಕ್ರೀಡಾಂಗಣಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಜೊತೆಗೆ ವೈದ್ಯಕೀಯ ಸೌಲಭ್ಯ ಕಲ್ಪಿಸಲಾಗಿದೆ. ವಿಜೇತ ತಂಡಕ್ಕೆ ಸಿಎಂ ಕಪ್ ನೀಡಲಾಗುವುದು. ವಿಜೇತರು, ಕೂಟ ದಾಖಲೆ ಮಾಡಿದವರಿಗೆ ನಗದು ಬಹುಮಾನ, ಮೆಡಲ್ ಹಾಗೂ ಟ್ರೋಫಿ ನೀಡಲಾಗುವುದು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.