
ನವದೆಹಲಿ(ಜ.06): 2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಹಗರಣದಲ್ಲಿ ಸುಪ್ರೀಂ ಕೋರ್ಟ್ನಿಂದ ತೀವ್ರ ಮುಖಭಂಗ ಅನುಭವಿಸಿದ ಬಿಸಿಸಿಐನ ಮಾಜಿ ಅಧ್ಯಕ್ಷ ಎನ್. ಶ್ರೀನಿವಾಸನ್ ಮತ್ತೆ ಭಾರತೀಯ ಕ್ರಿಕೆಟ್'ನಲ್ಲಿ ಪ್ರಮುಖ ಪಾತ್ರ ವಹಿಸಲು ಕಾರ್ಯತಂತ್ರ ಹೆಣೆದಿದ್ದಾರೆ ಎಂದು ‘ದಿ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ.
ಕೆಎಸ್ಸಿಎ ಕಾರ್ಯದರ್ಶಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಬ್ರಿಜೇಶ್ ಪಟೇಲ್ ಸದ್ಯ ಬಿಸಿಸಿಐನಲ್ಲಿ ಉನ್ನತ ಹುದ್ದೆ ಮೇಲೆ ಕಣ್ಣಿಟ್ಟಿದ್ದು, ಇದೇ ಶನಿವಾರ ಬೆಂಗಳೂರಿನಲ್ಲಿ ಈ ಇಬ್ಬರೂ ಭೇಟಿಯಾಗಿ ಮುಂದಿನ ನಡೆಯ ಬಗ್ಗೆ ಚರ್ಚೆ ನಡೆಸುವ ಸಂಭವವಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
ಇನ್ನು ಕಳೆದೊಂದು ದಶಕದಿಂದಲೂ ತಮಿಳುನಾಡು ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿಯಾಗಿರುವ ಕಾಶಿ ವಿಶ್ವನಾಥ್ ಕೂಡ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಇದೇ 19ರೊಳಗೆ ಬಿಸಿಸಿಐಗೆ ಹೊಸ ಆಡಳಿತ ಸಮಿತಿಯನ್ನು ಸರ್ವೋಚ್ಚ ನ್ಯಾಯಾಲಯ ನೇಮಿಸಲಿದೆ. ಆದರೆ, ಲೋಧಾ ಸಮಿತಿ ಶಿಫಾರಸು ಅನುಷ್ಠಾನಗೊಳಿಸಲು ಸಂವಿಧಾನದಲ್ಲಿ ಬದಲಾವಣೆ ಅನಿವಾರ್ಯವಾಗಿದೆ. ಇದಕ್ಕೆ ನಾಲ್ಕನೇ ಮೂರರಷ್ಟು ಬೆಂಬಲ ಬೇಕು. ಆದರೆ, 17 ರಾಜ್ಯಗಳು ಈಗಲೂ ಸಂವಿಧಾನ ಬದಲಾವಣೆಗೆ ಒಪ್ಪುತ್ತಿಲ್ಲ. ಹೀಗಾಗಿ ಶ್ರೀನಿವಾಸನ್ ನೇತೃತ್ವದ ಈ ಸಭೆ ತೀವ್ರ ಕೌತುಕ ಕೆರಳಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.