ಚುನಾವಣಾ ದಿನಾಂಕ ನಿಗದಿ ಬೆನ್ನಲ್ಲೇ ಸಚಿನ್, ಕೊಹ್ಲಿ ನೆರವು ಕೇಳಿದ ಮೋದಿ!

Published : Mar 13, 2019, 04:01 PM ISTUpdated : Mar 13, 2019, 04:06 PM IST
ಚುನಾವಣಾ ದಿನಾಂಕ ನಿಗದಿ ಬೆನ್ನಲ್ಲೇ ಸಚಿನ್, ಕೊಹ್ಲಿ ನೆರವು ಕೇಳಿದ ಮೋದಿ!

ಸಾರಾಂಶ

ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ದಿಗ್ಗಜ ಕ್ರಿಕೆಟಿಗರಲ್ಲಿ ಮನವಿ ಮಾಡಿದ್ದಾರೆ. ಸಚಿನ್ ತೆಂಡುಲ್ಕರ್, ವಿರಾಟ್ ಕೊಹ್ಲಿ, ಎಂ.ಎಸ್.ಧೋನಿ, ಅನಿಲ್ ಕುಂಬ್ಳೆ ಸೇರಿದಂತೆ ಸ್ಟಾರ್ ಕ್ರಿಕೆಟಿಗರಲ್ಲಿ ಮೋದಿ ಮನವಿ ಮಾಡಿದ್ದಾರೆ. ಅಷ್ಟಕ್ಕೂ ಮೋದಿ ಮಾಡಿದ  ಮನವಿಯೇನು? ಇಲ್ಲಿದೆ ವಿವರ.  

ನವದೆಹಲಿ(ಮಾ.13): ಟೀಂ ಇಂಡಿಯಾ ಕ್ರಿಕೆಟಿಗರು 12ನೇ ಆವೃತ್ತಿ ಐಪಿಎಲ್ ಟೂರ್ನಿಗೆ ಸದ್ದಿಲ್ಲದೇ ತಯಾರಿ ಆರಂಭಿಸಿದ್ದರೆ, ಇತ್ತ ಪ್ರಧಾನಿ ನರೇಂದ್ರ ಮೋದಿ ಹಾಗೂ ಎಲ್ಲಾ ರಾಜಕೀಯ ಪಕ್ಷಗಳು 2019ರ ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದೆ. ಲೋಕ ಸಮರದ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಪ್ರಧಾನಿ ಮೋದಿ, ಸಚಿನ್ ತೆಂಡುಲ್ಕರ್, ವಿರಾಟ್ ಕೊಹ್ಲಿ ಸೇರಿದಂತೆ ಟೀಂ ಇಂಡಿಯಾ ದಿಗ್ಗಜ ಕ್ರಿಕೆಟಿಗರ ನೆರವು ಕೇಳಿದ್ದಾರೆ.

ಇದನ್ನೂ ಓದಿ: ಲೋಕಸಮರದ ದಿನಾಂಕ ಪ್ರಕಟ: ಮತದಾನಕ್ಕೆ ಸಜ್ಜಾಯಿತು ದೇಶ!

ಮೋದಿ ನೆರವು ಕೇಳಿರುವುದು ತಮಗೆ ಅಥವಾ ಬಿಜೆಪಿಗಾಗಿ ಅಲ್ಲ. ಬದಲಾಗಿ ಚುನಾವಣೆ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಹಾಲಿ ಹಾಗೂ ಮಾಜಿ ಕ್ರಿಕೆಟಿಗರಲ್ಲಿ ಮೋದಿ ಮನವಿ ಮಾಡಿದ್ದಾರೆ. ಎಲ್ಲರೂ ಮತದಾನ ಮಾಡುವಂತೆ ಮತದಾರರಲ್ಲಿ ಅರಿವು ಮೂಡಿಸಿ ಎಂದು ಮೋದಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕೊಹ್ಲಿ-ಸೆಹ್ವಾಗ್ ಸನ್ಮಾನ ರದ್ದು: ಹುತಾತ್ಮರಿಗೆ ಹಣ

ಮತದಾನ ಮಾಡಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಎಂ.ಎಸ್.ಧೋನಿ, ರೋಹಿತ್ ಶರ್ಮಾ, ಅನಿಲ್ ಕುಂಬ್ಳೆ, ವಿವಿಎಸ್ ಲಕ್ಷ್ಮಣ್, ವಿರೇಂದ್ರ ಸೆಹ್ವಾಗ್ ಬಳಿ ಮೋದಿ ಮನವಿ ಮಾಡಿದ್ದಾರೆ. 17ನೇ ಲೋಕಸಭಾ ಚುನಾವಣೆ ಎಪ್ರಿಲ್ 11 ರಿಂದ ಮೇ 19ರ ವರೆಗೆ ನಡೆಯಲಿದೆ. ಚುನಾವಣೆಯಲ್ಲಿ ಮತದಾರರು ಪಾಲ್ಗೊಳ್ಳುವಂತೆ ಜಾಗೃತಿ ಮೂಡಿಸಲು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಕ್ರಿಕೆಟಿಗರ ಜೊತೆ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಹಾಗೂ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್‌ಗೂ ಮನವಿ ಮಾಡಿದ್ದಾರೆ.

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?