ರಾಷ್ಟ್ರೀಯ ಬ್ಯಾಡ್ಮಿಂಟನ್‌: ಸೈನಾ ನೆಹ್ವಾಲ್, ಸೌರಭ್‌ ಚಾಂಪಿಯನ್‌

Published : Feb 17, 2019, 09:43 AM IST
ರಾಷ್ಟ್ರೀಯ ಬ್ಯಾಡ್ಮಿಂಟನ್‌: ಸೈನಾ ನೆಹ್ವಾಲ್, ಸೌರಭ್‌ ಚಾಂಪಿಯನ್‌

ಸಾರಾಂಶ

ರಾಷ್ಟ್ರೀಯ ಬ್ಯಾಡ್ಮಿಂಟನ್‌ ಫೈನಲ್ ಪಂದ್ಯದಲ್ಲಿ ಸತತ 2ನೇ ಬಾರಿ ಸಿಂಧು ವಿರುದ್ಧ  ಸೈನಾ ನೆಹ್ವಾಲ್ ಗೆಲುವು ಸಾಧಿಸಿದ್ದಾರೆ. ಪುರುಷರ ಸಿಂಗಲ್ಸ್‌ ಚಾಂಪಿಯನ್‌ ಆಗಿ ಮಧ್ಯಪ್ರದೇಶದ ಸೌರಭ್‌ ವರ್ಮಾ ಹೊರಹೊಮ್ಮಿದ್ದಾರೆ.

ಗುವಾಹಟಿ(ಫೆ.17): ಭಾರತದ ತಾರಾ ಶಟ್ಲರ್‌ ಸೈನಾ ನೆಹ್ವಾಲ್‌, ಒಲಿಂಪಿಕ್‌ ಬೆಳ್ಳಿ ವಿಜೇತೆ ಪಿ.ವಿ.ಸಿಂಧು ವಿರುದ್ಧ ಸುಲಭ ಗೆಲುವು ಸಾಧಿಸುವ ಮೂಲಕ 83ನೇ ರಾಷ್ಟ್ರೀಯ ಬ್ಯಾಡ್ಮಿಂಟನ್‌ ಟೂರ್ನಿಯ ಮಹಿಳಾ ಸಿಂಗಲ್ಸ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ. ಸತತ 2ನೇ ವರ್ಷ ಸಿಂಧು ವಿರುದ್ಧ ಫೈನಲ್‌ ಆಡಿದ ಸೈನಾ, 21-18, 21-15 ನೇರ ಗೇಮ್‌ಗಳಲ್ಲಿ ಗೆಲುವು ಸಾಧಿಸಿ, 4ನೇ ಬಾರಿಗೆ ರಾಷ್ಟ್ರೀಯ ಚಾಂಪಿಯನ್‌ ಆದರು.

ಇದನ್ನೂ ಓದಿ: ತನ್ನ ಜಾಕೆಟ್ ಮೇಲೆ ಸಹಿ ಮಾಡಿ ಅಭಿಮಾನಿಗೆ ನೀಡಿದ ಜೋಕೋವಿಚ್

ಕಳೆದ ವರ್ಷ ನಾಗ್ಪುರದಲ್ಲಿ ನಡೆದಿದ್ದ ಟೂರ್ನಿಯ ಫೈನಲ್‌ನಲ್ಲೂ 2012ರ ಒಲಿಂಪಿಕ್ಸ್‌ ಕಂಚು ವಿಜೇತೆ ಸೈನಾ, ಸಿಂಧು ವಿರುದ್ಧ ಜಯಭೇರಿ ಬಾರಿಸಿದ್ದರು. ಕಳೆದ ವರ್ಷ ಗೋಲ್ಡ್‌ಕೋಸ್ಟ್‌ ಕಾಮನ್‌ವೆಲ್ತ್‌ ಕ್ರೀಡಾಕೂಟದ ಫೈನಲ್‌ನಲ್ಲೂ ಸೈನಾ, ಸಿಂಧು ವಿರುದ್ಧ ಗೆಲುವು ಪಡೆದಿದ್ದರು. ಭಾರತದ ತಾರಾ ಶಟ್ಲರ್‌ಗಳ ನಡುವಿನ ಫೈನಲ್‌ ಸೆಣಸಾಟ ಭಾರೀ ಕುತೂಹಲ ಕೆರಳಿಸಿತ್ತು. ಭಾರೀ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು ರೋಚಕ ಪಂದ್ಯಕ್ಕೆ ಸಾಕ್ಷಿಯಾದರು.

ಇದನ್ನೂ ಓದಿ: ಸೆಪ್ಟೆಂಬರ್‌ನಲ್ಲಿ ಭಾರತ-ಪಾಕ್‌ ಡೇವಿಸ್‌ ಕಪ್‌ ಅನುಮಾನ!

ಲಕ್ಷ್ಯ ವಿರುದ್ಧ ಗೆದ್ದ ಸೌರಭ್‌: ಪುರುಷರ ಸಿಂಗಲ್ಸ್‌ ಚಾಂಪಿಯನ್‌ ಆಗಿ ಮಧ್ಯಪ್ರದೇಶದ ಸೌರಭ್‌ ವರ್ಮಾ ಹೊರಹೊಮ್ಮಿದರು. ಫೈನಲ್‌ನಲ್ಲಿ 17 ವರ್ಷದ ಲಕ್ಷ್ಯ ಸೆನ್‌ ವಿರುದ್ಧ 21-18, 21-13 ನೇರ ಗೇಮ್‌ಗಳಲ್ಲಿ ಗೆಲುವು ಸಾಧಿಸಿದ ಸೌರಭ್‌ 3ನೇ ಬಾರಿಗೆ ರಾಷ್ಟ್ರೀಯ ಚಾಂಪಿಯನ್‌ ಪಟ್ಟಕ್ಕೇರಿದರು. 2011, 2017ರಲ್ಲಿ ಅವರು ಪ್ರಶಸ್ತಿ ಜಯಿಸಿದ್ದರು. ಪುರುಷರ ಡಬಲ್ಸ್‌ನಲ್ಲಿ ಪ್ರಣವ್‌ ಜೆರ್ರಿ ಚೋಪ್ರಾ ಹಾಗೂ ಚಿರಾಗ್‌ ಶೆಟ್ಟಿಜೋಡಿ ಪ್ರಶಸ್ತಿ ಗೆದ್ದುಕೊಂಡಿತು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL Playoffs: ಒಂದೇ ಸ್ಥಾನ, 4 ತಂಡಗಳ ಫೈಟ್! ಯಾರಿಗೆ ಸಿಗಲಿದೆ ಕೊನೆಯ ಚಾನ್ಸ್?
ಚೇಸ್ ಮಾಡಿ ಗೆಲ್ಲೋ ಚಾನ್ಸ್ ಇದ್ದರೂ 166 ರನ್ ದಾಟಿಸಲು ಪ್ರಯತ್ನಿಸಿ ಸೋಲು ಕಂಡಿತಾ ಆರ್‌ಸಿಬಿ?