ರಾಷ್ಟ್ರೀಯ ಕಬಡ್ಡಿ ಚಾಂಪಿಯನ್‌ಶಿಪ್ : ಕರ್ನಾಟಕಕ್ಕೆ ಆಘಾತ

Published : Jan 31, 2019, 08:24 AM IST
ರಾಷ್ಟ್ರೀಯ ಕಬಡ್ಡಿ ಚಾಂಪಿಯನ್‌ಶಿಪ್ : ಕರ್ನಾಟಕಕ್ಕೆ ಆಘಾತ

ಸಾರಾಂಶ

ರಾಷ್ಟ್ಪೀಯ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಬಲಿಷ್ಠ ತಂಡವಾಗಿ ಗುರಿತಿಸಿಕೊಂಡಿದ್ದ ಕರ್ನಾಟಕ ತಂಡಕ್ಕೆ ಆಘಾತವಾಗಿದೆ. ಪ್ರಶಸ್ತಿ ಗೆಲ್ಲೋ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದ್ದ ಕರ್ನಾಟಕ ಟೂರ್ನಿಯಿಂದ ಹೊರಬಿದ್ದಿದೆ.

ರೋಹಾ(ಜ.30): ಮಹಾರಾಷ್ಟ್ರದ ರೋಹಾದಲ್ಲಿ ನಡೆಯುತ್ತಿರುವ 66ನೇ ರಾಷ್ಟ್ರೀಯ ಪುರುಷರ ಕಬಡ್ಡಿ ಚಾಂಪಿಯನ್‌ಶಿಪ್‌ನಿಂದ ಕರ್ನಾಟಕ ತಂಡ ಹೊರಬಿದ್ದಿದೆ. ಈ ಮೂಲಕ ಚಾಂಪಿಯನ್ ನಿರೀಕ್ಷೆಯಲ್ಲಿದ್ದ ಕರ್ನಾಟಕ ತಂಡಕ್ಕೆ ತೀವ್ರ ನಿರಾಸೆಯಾಗಿದೆ. ಇಷ್ಟೇ ಅಲ್ಲ ಟೂರ್ನಿಯಿಂದ ಪ್ರಬಲ ತಂಡವೊಂದು ನಿರ್ಗಮಿಸಿದ ಬೇಸರ ಅಭಿಮಾನಿಗಳಲ್ಲಿ ಕಾಡುತ್ತಿದೆ.

ಇದನ್ನೂ ಓದಿ: ಟಾಪ್ ಯೋಜನೆಗೆ ಪ್ಯಾರಾ ಕ್ರೀಡಾಳುಗಳ ಸೇರ್ಪಡೆ

‘ಡಿ’ ಗುಂಪಿನಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದು ನಾಕೌಟ್‌ ಪ್ರವೇಶಿಸಿದ್ದ ಕರ್ನಾಟಕ, ಅಂತಿಮ 16ರ ಸುತ್ತಿನಲ್ಲಿ ಪುದುಚೇರಿ ವಿರುದ್ಧ ಗೆಲುವು ಸಾಧಿಸಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿತು. ಆದರೆ ಕ್ವಾರ್ಟರ್‌ ಫೈನಲ್‌ನಲ್ಲಿ ಬಲಿಷ್ಠ ಭಾರತೀಯ ರೈಲ್ವೇಸ್‌ ವಿರುದ್ಧ 42-53 ಅಂಕಗಳ ಅಂತರದಲ್ಲಿ ಸೋಲುಂಡಿತು. 

ಇದನ್ನೂ ಓದಿ: ಸ್ಪೇನ್ ವಿರುದ್ದ ಭಾರತ ಮಹಿಳಾ ತಂಡಕ್ಕೆ 5-2 ಅಂತರದ ಗೆಲುವು!

ರೈಲ್ವೇಸ್‌ ಪರ ಪ್ರೊ ಕಬಡ್ಡಿಯ ಬೆಂಗಳೂರು ಬುಲ್ಸ್‌ ಆಟಗಾರ ಪವನ್‌ ಕುಮಾರ್‌ ಅತ್ಯಾಕರ್ಷಕ ಪ್ರದರ್ಶನ ತೋರಿದರು. ಮೊದಲ ಸೆಮೀಸ್‌ನಲ್ಲಿ ಮಹಾರಾಷ್ಟ್ರ-ರೈಲ್ವೇಸ್‌ ಮುಖಾಮುಖಿಯಾದರೆ, 2ನೇ ಸೆಮೀಸ್‌ನಲ್ಲಿ ಹರ್ಯಾಣ-ಸವೀರ್‍ಸಸ್‌ ಎದುರಾಗಲಿವೆ. ಗುರುವಾರ ಸೆಮಿಫೈನಲ್‌ ಹಾಗೂ ಫೈನಲ್‌ ಪಂದ್ಯ ನಡೆಯಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?
T20I ನೂರು ಸಿಕ್ಸರ್ ಕ್ಲಬ್ ಸೇರಿದ ಹಾರ್ದಿಕ್ ಪಾಂಡ್ಯ; ರೋಹಿತ್ ರೆಕಾರ್ಡ್ ಮುರಿತಾರಾ ಈ ಆಲ್ರೌಂಡರ್?