
ದುಬೈ(ಮೇ.17): ಐಸಿಸಿ ವಿಶ್ವ ಇಲೆವನ್ ತಂಡಕ್ಕೆ ಆಯ್ಕೆಯಾಗಿರುವ ನೇಪಾಳದ ಯುವ ಸ್ಪಿನ್ನರ್ ಸಂದೀಪ್ ಲಮಿಚ್ಚಾನೆ, ಕ್ರಿಕೆಟ್ ಲೋಕದಲ್ಲಿ ಗಮನ ಸೆಳೆದಿದ್ದಾರೆ.
ಕಳೆದ ವರ್ಷ ಚಂಡ ಮಾರುತದಿಂದಾಗಿ ಹಾನಿಗೊಳಗಾಗಿರುವ ಕೆರೆಬಿಯನ್ ಕ್ರೀಡಾಂಗಣಗಳ ಶ್ರೇಯೋಭಿವೃದ್ಧಿಗಾಗಿ ದೇಣಿಗೆ ಸಂಗ್ರಹಿಸಲು ಲಂಡನ್'ನ ಲಾರ್ಡ್ಸ್ ಅಂಗಳದಲ್ಲಿ ಇದೇ 31ರಂದು ನಡೆಯಲಿರುವ ವೆಸ್ಟ್'ಇಂಡೀಸ್ ವಿರುದ್ಧದ ಟಿ20 ಪಂದ್ಯದಲ್ಲಿ ಸಂದೀಪ್ ಪಾಲ್ಗೊಳ್ಳಲಿದ್ದಾರೆ.
ಲಮಿಚ್ಚಾನೆ ಸದ್ಯ ಐಪಿಎಲ್'ನಲ್ಲಿ ಡೆಲ್ಲಿ ಪರ ಆಡುತ್ತಿದ್ದಾರೆ. ಬಾಂಗ್ಲಾದ ಆಲ್'ರೌಂಡರ್ ಶಕೀಬ್ ಅಲ್ ಹಸನ್ ವೈಯಕ್ತಿಕ ಕಾರಣಗಳಿಂದಾಗಿ ವಿಶ್ವ ಇಲೆವನ್ ತಂಡದಿಂದ ಹಿಂದೆ ಸರಿದ ಕಾರಣ, ಸಂದೀಪ್ಗೆ ಸ್ಥಾನ ಸಿಕ್ಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.