
ಮುಂಬೈ (ಜೂ.22) ಮುಂದಿನ ತಿಂಗಳು ಕೊನೆ ವಾರದಲ್ಲಿ ಭಾರತ ತಂಡ ಶ್ರೀಲಂಕಾ ಪ್ರವಾಸ ತೆರಳಲಿದ್ದು, ಅದಕ್ಕೂ ಮುನ್ನ ನೂತನ ಕೋಚ್ ನೇಮಕ ಮಾಡಲಾಗುವುದು ಎಂದು ಬಿಸಿಸಿಐ ಹಿರಿಯ ಅಧಿಕಾರಿ ರಾಜೀವ್ ಶುಕ್ಲಾ ತಿಳಿಸಿದ್ದಾರೆ.
‘ಕೊಹ್ಲಿ ಹಾಗೂ ಕುಂಬ್ಳೆ ನಡುವಿನ ಮನಸ್ತಾಪವನ್ನು ಸರಿಪಡಿಸಲು ಬಿಸಿಸಿಐ ಎಲ್ಲಾ ಪ್ರಯತ್ನಗಳನ್ನು ನಡೆಸಿತು. ಆದರೆ ಪ್ರಯತ್ನಗಳೆಲ್ಲಾ ವಿಫಲವಾದವು' ಎಂದು ಶುಕ್ಲಾ ಹೇಳಿದ್ದಾರೆ. ಅಲ್ಲದೇ ಕುಂಬ್ಳೆ ಕೆಳಗಿಳಿಯಲು ಕೊಹ್ಲಿ ಒಬ್ಬರೇ ಕಾರಣ ಎನ್ನುವುದನ್ನು ಒಪ್ಪಲು ತಾವು ಸಿದ್ಧರಿಲ್ಲ ಎಂದು ಶುಕ್ಲಾ ಹೇಳಿದ್ದಾರೆ.
ಶ್ರೀಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾವು ಮೂರು ಟೆಸ್ಟ್, ಐದು ಏಕದಿನ ಹಾಗೂ ಒಂದು ಟಿ20 ಪಂದ್ಯವನ್ನು ಆಡಲಿದೆ.
ಶಾಸ್ತ್ರಿಗೆ ಪಟ್ಟ..?
ಒಂದುವೇಳೆ ಬಿಸಿಸಿಐ ಸಲಹಾ ಸಮಿತಿ ಒಪ್ಪಿದರೆ ರವಿಶಾಸ್ತ್ರಿ ಅವರನ್ನು ಕೋಚ್ ಸ್ಥಾನಕ್ಕೆ ಪರಿಗಣಿಸಲು ಸಿದ್ಧ ಎಂದು ಬಿಸಿಸಿಐ ಆಡಳಿತ ಸಮಿತಿ ಹೇಳಿದೆ.
ರವಿಶಾಸ್ತ್ರಿ ಹಾಗೂ ಕೊಹ್ಲಿ ನಡುವೆ ಉತ್ತಮ ಬಾಂಧವ್ಯವಿದೆ. ಈ ಹಿಂದೆ ರವಿಶಾಸ್ತ್ರಿ ತಂಡದ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಆದರೆ ರವಿಶಾಸ್ತ್ರಿ ಕೋಚ್ ಹುದ್ದೆಗೆ ಈ ಬಾರಿ ಅರ್ಜಿಸಲ್ಲಿಸಿಲ್ಲ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.