
ಕೊಲಂಬೊ(ಮಾ.16): ತ್ರಿಕೋನ ಟಿ20 ಸರಣಿಯ ಅಂತಿಮ ಲೀಗ್ ಪಂದ್ಯ ಇಂದು ನಡೆಯಲಿದೆ. ಶ್ರೀಲಂಕಾ-ಬಾಂಗ್ಲಾದೇಶ ತಂಡಗಳು ಸೆಣಸಲಿದ್ದು, ಗೆಲ್ಲುವ ತಂಡ ಫೈನಲ್'ನಲ್ಲಿ ಭಾರತವನ್ನು ಎದುರಿಸಲಿದೆ.
ಉಭಯ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾದಾಗ, ಲಂಕಾ ವಿರುದ್ಧ ಬಾಂಗ್ಲಾ ದಾಖಲೆ ಮೊತ್ತವನ್ನು ಬೆನ್ನಟ್ಟಿ ಗೆಲುವು ಸಾಧಿಸಿತ್ತು.
ಬಾಂಗ್ಲಾಗೆ ಶಕೀಬ್ ಬಲ: ಬೆರಳಿನ ಗಾಯದ ಸಮಸ್ಯೆಯಿಂದ ಲಂಕಾ ಪ್ರವಾಸದಿಂದ ದೂರ ಉಳಿದಿದ್ದು, ತಾರಾ ಆಲ್ರೌಂಡರ್ ಶಕೀಬ್ ಅಲ್ ಹಸನ್ ಬಾಂಗ್ಲಾದೇಶ ತಂಡವನ್ನು ಕೂಡಿಕೊಂಡಿದ್ದಾರೆ. ಇದರೊಂದಿಗೆ ಬಾಂಗ್ಲಾ ಬಲ ದ್ವಿಗುಣಗೊಂಡಿದೆ. ಇಂದಿನ ಪಂದ್ಯದಲ್ಲಿ ಶಕೀಬ್ ಕಣಕ್ಕಿಳಿಯುವ ನಿರೀಕ್ಷೆ ಇದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.