
ನವದೆಹಲಿ(ಜು.02): ಚಾಂಪಿಯನ್ಸ್ ಟ್ರೋಫಿ ಸಮಯದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಮಾಜಿ ಕೋಚ್ ಅನಿಲ್ ಕುಂಬ್ಳೆ ನಡುವೆ ಯಾವುದೇ ಭಿನ್ನಾಭಿಪ್ರಾಯ ಉಂಟಾಗಿರಲಿಲ್ಲ ಎಂದು ತಂಡದ ಮ್ಯಾನೇಜರ್ ಕಪಿಲ್ ಮಲ್ಹೋತ್ರಾ ಸ್ಪಷ್ಟಪಡಿಸಿದ್ದಾರೆ.
ಭಾರತ ತವರಿನಲ್ಲಾಗಲೀ ಅಥವಾ ವಿದೇಶದಲ್ಲಾಗಲಿ ಯಾವುದೇ ಪಂದ್ಯಾವಳಿ ಅಥವಾ ಸರಣಿಯನ್ನಾಡಿದ ಬಳಿಕ ತಂಡದ ಮ್ಯಾನೇಜರ್ ಸಾಮಾನ್ಯವಾಗಿ ವರದಿ ನೀಡುತ್ತಾರೆ. ಇದೀಗ ಚಾಂಪಿಯನ್ಸ್ ಟ್ರೋಫಿ ವೇಳೆ ತಂಡದ ಕುರಿತು ಮಲ್ಹೋತ್ರಾ ವರದಿ ಸಲ್ಲಿಸಿದ್ದು, ಕುಂಬ್ಳೆ ಹಾಗೂ ಕೊಹ್ಲಿ ನಡುವೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಉಲ್ಲೇಖಿಸಿದ್ದಾರೆ.
ಅನಿಲ್ ಕುಂಬ್ಳೆ ಕೋಚ್ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದಂತೆ, ವಿರಾಟ್ ಕೊಹ್ಲಿ ಹಾಗೂ ಕುಂಬ್ಳೆ ನಡುವೆ ಎಲ್ಲವೂ ಸರಿಯಿಲ್ಲ. ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ವದಂತಿಗಳು ಹರಿದಾಡ ತೊಡಗಿದ್ದವು. ಈ ಸಂಬಂಧ ‘ಕಪಿಲ್ ಮಲ್ಹೋತ್ರ ವರದಿ ಸಲ್ಲಿಸಿದ್ದರು. ವರದಿಯಲ್ಲಿ ಕನಿಷ್ಠ ಕೊಹ್ಲಿ, ಅನಿಲ್ ಕುಂಬ್ಳೆ ಅವರೊಂದಿಗೆ ಕನಿಷ್ಠ ಒರಟಾಗಿಯೂ ನಡೆದುಕೊಂಡಿಲ್ಲವೆಂದು ವರದಿಯಲ್ಲಿ ಮಲ್ಹೋತ್ರ ತಿಳಿಸಿದ್ದಾರೆ’ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.