
ಲಂಡನ್(ಜು.28]: ಇಂಗ್ಲೆಂಡ್ ಟೆಸ್ಟ್ ತಂಡದಲ್ಲಿ ತಮಗೆ ಸ್ಥಾನ ಸಿಕ್ಕಿದ್ದನ್ನು ಟೀಕಿಸಿದ್ದ ಮಾಜಿ ನಾಯಕ ಮೈಕಲ್ ವಾನ್ ವಿರುದ್ಧ ಆದಿಲ್ ರಶೀದ್ ಸಿಡಿಮಿಡಿಗೊಂಡಿದ್ದಾರೆ.
ವಾನ್ ಹೇಳಿಕೆಯನ್ನು ತಾವು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದಿದ್ದಾರೆ. ನಿವೃತ್ತಿ ಹಿಂಪಡೆದು ಟೆಸ್ಟ್ ತಂಡಕ್ಕೆ ವಾಪಸಾದ ರಶೀದ್, ದೇಸಿ ಪಂದ್ಯಗಳಲ್ಲಿ ಆಡುವುದಿಲ್ಲ ಎನ್ನುವ ವಿಷಯನ್ನು ಮುಂದಿಟ್ಟುಕೊಂಡು ವಾನ್, ಟೀಕಿಸಿದ್ದರು. ‘ವಾನ್ ಏನು ಬೇಕಿದ್ದರೂ ಹೇಳಿಕೊಳಲಿ. ಅವರ ಮಾತನ್ನು ಎಲ್ಲರೂ ಕೇಳುತ್ತಾರೆ ಎಂದು ಭಾವಿಸಿದ್ದಾರೆ. ಆದರೆ ಯಾರೂ ಅವರ ಮಾತುಗಳಿಗೆ ಬೆಲೆ ನೀಡುವುದಿಲ್ಲ. ಅವರ ಅಭಿಪ್ರಾಯಗಳಿಗೆ ಕಿಮ್ಮತ್ತಿಲ್ಲ. ಅನಗತ್ಯವಾಗಿ ಅರ್ಥವಿಲ್ಲದ ಮಾತುಗಳನ್ನು ವಾನ್ ಆಡುತ್ತಿರುತ್ತಾರೆ’ ಎಂದು ರಶೀದ್ ಹೇಳಿದ್ದಾರೆ.
ಭಾರತ-ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯ ಆಗಸ್ಟ್ 01ರಿಂದ ಆರಂಭವಾಗಲಿದ್ದು, ಸೀಮಿತ ಓವರ್’ಗಳ ಪಂದ್ಯದಲ್ಲಿ ಮಿಂಚಿದ್ದ ಆದಿಲ್ ರಶೀದ್ ಟೆಸ್ಟ್ ಸರಣಿಗೆ ಕಮ್’ಬ್ಯಾಕ್ ಮಾಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.