ನಾವೇನು ಮಾಡಬೇಕೆಂದು ಹೊರಗಿಸನವರು ಹೇಳಬೇಕಿಲ್ಲ; ಸಚಿನ್ ಕಿಡಿ

Published : Apr 05, 2018, 03:38 PM ISTUpdated : Apr 14, 2018, 01:13 PM IST
ನಾವೇನು ಮಾಡಬೇಕೆಂದು ಹೊರಗಿಸನವರು ಹೇಳಬೇಕಿಲ್ಲ; ಸಚಿನ್ ಕಿಡಿ

ಸಾರಾಂಶ

‘ನಮ್ಮ ದೇಶದಲ್ಲಿ ತಿಳುವಳಿಕೆ ಇರುವ ಅನೇಕ ಜನರಿದ್ದಾರೆ. ನಾವು ಯಾವಾಗ, ಎಲ್ಲಿ ಏನು ಮಾಡಬೇಕೆಂದು ಹೊರಗಿನವರು ಹೇಳಿಕೊಡುವ ಅಗತ್ಯವಿಲ್ಲ’ ಎಂದು ಸಚಿನ್ ತೆಂಡುಲ್ಕರ್ ಕಟುವಾಗಿ ಟೀಕಿಸಿದ್ದಾರೆ.

ಬೆಂಗಳೂರು(ಏ.05): ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ ವಿರುದ್ಧ ಟ್ವೀಟ್ ಮಾಡಿ ಅನಗತ್ಯ ವಿವಾದ ಸೃಷ್ಟಿಸಿರುವ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ವಿರುದ್ಧ ಭಾರತೀಯ ಕ್ರಿಕೆಟಿಗರು ಗುಡುಗಿದ್ದಾರೆ.

ಮಂಗಳವಾರ ಅಫ್ರಿದಿ ಟ್ವೀಟ್ ಮಾಡಿದ ಬಳಿಕ, ಗೌತಮ್ ಗಂಭೀರ್ ಪ್ರತಿಕ್ರಿಯಿಸಿ, ಪಾಕ್ ಆಟಗಾರನಿಗೆ ಬಿಸಿ ಮುಟ್ಟಿಸಿದರು. ಸಚಿನ್ ತೆಂಡುಲ್ಕರ್, ಕಪಿಲ್ ದೇವ್, ವಿರಾಟ್ ಕೊಹ್ಲಿ, ಮೊಹಮದ್ ಕೈಫ್, ಸುರೇಶ್ ರೈನಾ ಸಹ ಪ್ರತಿಕ್ರಿಯಿಸಿದ್ದಾರೆ. ‘ನಮ್ಮ ದೇಶದಲ್ಲಿ ತಿಳುವಳಿಕೆ ಇರುವ ಅನೇಕ ಜನರಿದ್ದಾರೆ. ನಾವು ಯಾವಾಗ, ಎಲ್ಲಿ ಏನು ಮಾಡಬೇಕೆಂದು ಹೊರಗಿನವರು ಹೇಳಿಕೊಡುವ ಅಗತ್ಯವಿಲ್ಲ’ ಎಂದು ಸಚಿನ್ ತೆಂಡುಲ್ಕರ್ ಕಟುವಾಗಿ ಟೀಕಿಸಿದ್ದಾರೆ.

ಮುಂಬೈನಲ್ಲಿ ಸೌರವ್ ಗಂಗೂಲಿ ಅವರ ಆತ್ಮಚರಿತ್ರೆ ಬಿಡುಗಡೆ ಕಾರ್ಯಕ್ರಮದಲ್ಲಿ ಸಚಿನ್ ಪಾಲ್ಗೊಂಡಿದ್ದರು. ಇದೇ ವೇಳೆ ‘ಅಫ್ರಿದಿ ಯಾರು?, ಅವರ ಮಾತಿಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ’ ಎಂದು ಕಪಿಲ್ ಹೇಳಿದ್ದಾರೆ.

ಬೆಂಗಳೂರಲ್ಲಿ ಐಪಿಎಲ್ ತಯಾರಿ ನಡೆಸುತ್ತಿರುವ ವಿರಾಟ್ ಕೊಹ್ಲಿ, ‘ದೇಶದ ವಿಷಯ ಬಂದಾಗ, ಮೊದಲ ಆದ್ಯತೆ ದೇಶಕ್ಕೇ ಆಗಿರಲಿದೆ. ದೇಶದ ವಿರುದ್ಧ ಯಾರೇ ಮಾತನಾಡಿದರು ಅದನ್ನು ನಾನು ಬೆಂಬಲಿಸುವುದಿಲ್ಲ’ ಎಂದರು. ಇನ್ನು ಸುರೇಶ್ ರೈನಾ ‘ಕಾಶ್ಮೀರದಲ್ಲಿ ಹಿಂಸಾಚಾರ ನಿಲ್ಲಬೇಕು ಎಂದರೆ ಭಯೋತ್ಪಾದನೆ ನಿಲ್ಲಿಸುವಂತೆ ಪಾಕ್ ಸೇನೆಯನ್ನು ಅಫ್ರಿದಿ ಕೇಳಿಕೊಳ್ಳಲಿ’ ಎಂದು ಟ್ವೀಟ್ ಮಾಡಿದ್ದಾರೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
Mock Auction: 30.5 ಕೋಟಿ ರೂಪಾಯಿ ದಾಖಲೆ ಮೊತ್ತಕ್ಕೆ ಕೆಕೆಆರ್‌ಗೆ ಕ್ಯಾಮರೂನ್‌ ಗ್ರೀನ್‌!