
ನವದೆಹಲಿ(ಸೆ.09): ಆರು ಈಶಾನ್ಯ ರಾಜ್ಯಗಳಿಗೆ 2018ರಿಂದ ರಣಜಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುವುದು ಎಂದು ಬಿಸಿಸಿಐ ಆಡಳಿತ ಮಂಡಳಿ ಮುಖ್ಯಸ್ಥ ವಿನೋದ್ ರಾಯ್ ಭರವಸೆ ನೀಡಿದ್ದಾರೆ.
ಮೇಘಾಲಯ, ಮಣಿಪುರ, ಮಿಜೋರಾಮ್, ಸಿಕ್ಕಿಂ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಅಧಿಕಾರಿಗಳು ವಿನೋದ್ ರಾಯ್ ಅವರನ್ನು ಭೇಟಿ ಮಾಡಿ ಆರು ರಾಜ್ಯಗಳು ಒಟ್ಟಾಗಿ ಒಂದು ತಂಡ ರಚಿಸಿ ರಣಜಿಯಲ್ಲಿ ಆಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಮುಂದಿನ ವರ್ಷದಿಂದ ಪ್ರತ್ಯೇಕವಾಗಿ ಆರೂ ತಂಡಗಳಿಗೆ ರಣಜಿಯಲ್ಲಿ ಆಡಲು ಅವಕಾಶ ಕಲ್ಪಿಸಲಾಗುವುದು, ಕಿರಿಯರ ವಿಭಾಗದಲ್ಲಿ ಈ ವರ್ಷದಿಂದಲೇ ತಂಡಗಳು ಪಾಲ್ಗೊಳ್ಳಬಹುದು ಎಂದು ವಿನೋದ್ ಹೇಳಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.