
ಕೋಲ್ಕತಾ(ಫೆ.21): ಪುಲ್ವಾಮಾ ದಾಳಿ ಬಳಿಕ ಪಾಕಿಸ್ತಾನ ಹೈರಾಣಾಗಿ ಹೋಗಿದೆ. ಪಾಕ್ ಪ್ರಚೋದಿತ ಭಯೋತ್ಪಾದನೆ ನಿಲ್ಲಿಸುವವರೆಗೂ ಪಾಕಿಸ್ತಾನ ಜೊತೆ ಯಾವುದೇ ವ್ಯವಹಾರಕ್ಕೆ ಭಾರತ ಮುಂದಾಗುತ್ತಿಲ್ಲ. ಇದೀಗ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಕೂಡ ಪಾಕಿಸ್ತಾನ ವಿರುದ್ಧ ಗುಡುಗಿದ್ದಾರೆ.
ಇದನ್ನೂ ಓದಿ: ಮೋದಿ ನಿರ್ಧಾರದ ಮೇಲೆ ನಿಂತಿದೆ ಟೀಂ ಇಂಡಿಯಾ ವಿಶ್ವಕಪ್ ಭವಿಷ್ಯ..!
ಪಾಕಿಸ್ತಾನ ಜೊತೆಗಿನ ಕ್ರಿಕೆಟ್ ಮಾತ್ರವಲ್ಲ, ಯಾವುದೇ ಕ್ರೀಡೆ ಬೇಡ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ. ಪಾಕಿಸ್ತಾನ ಜೊತೆಗಿನ ಯಾವುದೇ ದ್ವಿಪಕ್ಷೀಯ ಸರಣಿ, ಕ್ರೀಡೆಗಳು ಸೂಕ್ತವಲ್ಲ. ಪುಲ್ವಾಮ ದಾಳಿ ಬಳಿಕ ಭಾರತೀಯ ಆಕ್ರೋಶ ಸರಿಯಾಗಿದೆ ಎಂದು ಗಂಗೂಲಿ ಹೇಳಿದ್ದಾರೆ. ಕ್ರಿಕೆಟಿಗರು ಪ್ರತಿನಿಧಿಸುತ್ತಿರುವುದು ದೇಶವನ್ನು ಹೀಗಾಗಿ ದೇಶ ಮೊದಲು ಎಂದಿದ್ದಾರೆ.
ಇದನ್ನೂ ಓದಿ: ಆಸಿಸ್ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಆಘಾತ- ಸ್ಟಾರ್ ಆಟಗಾರ ಔಟ್!
ಪಾಕ್ ಮೂಲದ ಜೈಶ್-ಇ-ಮೊಹಮ್ಮದ್ ಸಂಘಟನೆ ಈ ದಾಳಿ ನಡೆಸಿದೆ. ಇಷ್ಟಾದರೂ ಈ ಸಂಘಟನೆಯ ಸಂಸ್ಥಾಪಕ ಪಾಕಿಸ್ತಾನದಲ್ಲಿ ಯಾವುದೇ ಆತಂಕವಿಲ್ಲದೆ ಒಡಾಡುತ್ತಿದ್ದಾನೆ. ಇಷ್ಟಾದರೂ ಪಾಕಿಸ್ತಾನ ಭಯೋತ್ಪಾದನೆಯನ್ನ ನಿಯಂತ್ರಿಸುತ್ತಿಲ್ಲ ಅನ್ನೋ ಆಕ್ರೋಶ ಇಡೀ ಭಾರತದಲ್ಲಿ ವ್ಯಕ್ತವಾಗುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.