ಆಟಗಾರರು ಕ್ರೀಡಾಂಗಣಕ್ಕೆ ಬರದಿದ್ದರೆ ಆಕಾಶವೇನು ಕಳಚಿ ಬೀಳುವುದಿಲ್ಲ; ಇದು ಕ್ರೀಡಾ ಸಚಿವರ ಪ್ರತಿಕ್ರಿಯೆ

Published : Dec 06, 2017, 05:54 PM ISTUpdated : Apr 11, 2018, 01:08 PM IST
ಆಟಗಾರರು ಕ್ರೀಡಾಂಗಣಕ್ಕೆ ಬರದಿದ್ದರೆ ಆಕಾಶವೇನು ಕಳಚಿ ಬೀಳುವುದಿಲ್ಲ; ಇದು ಕ್ರೀಡಾ ಸಚಿವರ ಪ್ರತಿಕ್ರಿಯೆ

ಸಾರಾಂಶ

‘ಇಲಾಖೆಯ ವಿರುದ್ಧ ಕೆಲವರು ಹೈಕೋರ್ಟ್‌'ನಲ್ಲಿ ಅರ್ಜಿ ಸಲ್ಲಿಸಿರುವುದು ಗಮನಕ್ಕೆ ಬಂದಿದೆ. ಕೆಲವು ಕ್ರೀಡಾಪಟುಗಳು ಕಂಠೀರವ ಸ್ಟೇಡಿಯಂಗೆ ತಾಲೀಮು ನಡೆಸಲು ಬಾರದಿದ್ದರೆ ಆಕಾಶವೇನೂ ಕಳಚಿ ಬೀಳುವುದಿಲ್ಲ’ ಎಂದು ಸಚಿವ ಪ್ರಮೋದ್ ಮಧ್ವರಾಜ್ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು(ಡಿ.06): ಕಂಠೀರವ ಕ್ರೀಡಾಂಗಣದ ಸಿಂಥೆಟಿಕ್ ಟ್ರ್ಯಾಕ್ ಬಳಕೆಗೆ ಕೆಲ ಅಥ್ಲೀಟ್‌'ಗಳು ಹಾಗೂ ಸರ್ಕಾರದ ನಡುವೆ ನಡುತ್ತಿರುವ ಜಟಾಪಟಿ ಮತ್ತೊಂದು ಹೆಜ್ಜೆ ಮುಂದಕ್ಕೆ ಹೋಗಿದೆ. ಸರ್ಕಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಕ್ಕೆ ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಇಲಾಖೆಯ ವಿರುದ್ಧ ಕೆಲವರು ಹೈಕೋರ್ಟ್‌'ನಲ್ಲಿ ಅರ್ಜಿ ಸಲ್ಲಿಸಿರುವುದು ಗಮನಕ್ಕೆ ಬಂದಿದೆ. ಕೆಲವು ಕ್ರೀಡಾಪಟುಗಳು ಕಂಠೀರವ ಸ್ಟೇಡಿಯಂಗೆ ತಾಲೀಮು ನಡೆಸಲು ಬಾರದಿದ್ದರೆ ಆಕಾಶವೇನೂ ಕಳಚಿ ಬೀಳುವುದಿಲ್ಲ’ ಎಂದು ಸಚಿವ ಪ್ರಮೋದ್ ಮಧ್ವರಾಜ್ ಪ್ರತಿಕ್ರಿಯಿಸಿದ್ದಾರೆ.

ವಿಕಾಸಸೌಧದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡುವ ವೇಳೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳಿಗೆ ಪ್ರವೇಶ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್ ಮೆಟ್ಟಿಲೇರಿದ ಕುರಿತಂತೆ ಪ್ರಶ್ನಿಸಿದಾಗ ಹೀಗೆಂದು ಉತ್ತರ ನೀಡಿದರು. ‘ಅಭ್ಯಾಸ ನಡೆಸಲು ಕ್ರೀಡಾಂಗಣಕ್ಕೆ ಯಾರು ಬಂದರೂ, ಬಾರದಿದ್ದರೂ ವ್ಯತ್ಯಾಸ ಆಗುವುದಿಲ್ಲ. ಆ ಬಗ್ಗೆ ಚಿಂತಿಸಬೇಕಿಲ್ಲ. ವಿವಾದ ಎಲ್ಲಾ ಕ್ಷೇತ್ರಗಳಲ್ಲೂ ಇರುತ್ತೆ. ಕ್ರೀಡಾ ಕ್ಷೇತ್ರದಲ್ಲೂ ವಿವಾದ ಇದೆ. ಇರಲಿ ಬಿಡಿ, ಆ ಬಗ್ಗೆ ಏಕೆ ಚಿಂತೆ? ಎಂದರು.

ಇದೇ ವೇಳೆ ಪತ್ನಿಯ ವಾಕಿಂಗ್‌'ಗಾಗಿ ಕ್ರೀಡಾಪಟುಗಳನ್ನು ಕ್ರೀಡಾಂಗಣದಿಂದ ಹೊರಗಿಟ್ಟ ಆರೋಪ ಎದುರಿಸುತ್ತಿರುವ ಇಲಾಖೆಯ ಅಧಿಕಾರಿ ಅನುಪಮ್ ಅಗರ್'ವಾಲ್ ಅವರನ್ನು ಸಹ ಸಚಿವರು ಇದೇ ವೇಳೆ ಸಮರ್ಥಿಸಿಕೊಂಡರು. ‘ಅಥ್ಲೀಟ್‌ಗಳಿಗೆ ನಿರ್ಬಂಧ ಹೇರಲಾಗಿದೆ ಎಂದು ಸದ್ಯ ಕೆಲವರು ಕೋರ್ಟ್‌'ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣ ನ್ಯಾಯಾಲಯದಲ್ಲಿರುವ ಕಾರಣ, ನಾನು ಆ ಬಗ್ಗೆ ಹೆಚ್ಚು ಹೇಳುವುದಿಲ್ಲ. ಇಂತಹ ಪ್ರಕರಣದಲ್ಲಿ ಕೋರ್ಟ್'ಗೆ ಹೋದರೆ ಒಂದು ರೀತಿ ಒಳ್ಳೆಯದೇ.ಕೋರ್ಟ್‌'ನಲ್ಲೇ ಸರ್ಕಾರ ಅರ್ಜಿದಾರರಿಗೆ ಉತ್ತರ ಕೊಡುತ್ತದೆ’ ಎಂದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಿನಿ ಹರಾಜಿನ ಬೆನ್ನಲ್ಲೇ KKR ತಂಡಕ್ಕೆ ಬಿಗ್ ಶಾಕ್! ₹9.2 ಕೋಟಿ ನೀಡಿ ಖರೀದಿಸಿದ ಈ ಸ್ಟಾರ್ ಕ್ರಿಕೆಟಿಗ ಐಪಿಎಲ್ ಆಡೋದೇ ಡೌಟ್!
ಟಿ20 ರ್‍ಯಾಂಕಿಂಗ್‌ನಲ್ಲಿ ಬುಮ್ರಾ ದಾಖಲೆ ಧೂಳೀಪಟ; ವರುಣ್ ಚಕ್ರವರ್ತಿ ಹೊಸ ದಾಖಲೆ