IPL ಆಡುತ್ತಿರುವ ಪಾಂಡ್ಯ, ರಾಹುಲ್’ಗೆ ಸಂಕಷ್ಟ..!

Published : Apr 02, 2019, 01:33 PM ISTUpdated : Apr 02, 2019, 02:00 PM IST
IPL ಆಡುತ್ತಿರುವ ಪಾಂಡ್ಯ, ರಾಹುಲ್’ಗೆ ಸಂಕಷ್ಟ..!

ಸಾರಾಂಶ

ಟೀಂ ಇಂಡಿಯಾ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ, ಕೆ.ಎಲ್ ರಾಹುಲ್ ’ಕಾಫಿ ವಿತ್ ಕರಣ್’ ವಿವಾದ ಇನ್ನೂ ಬಗೆಹರಿದಿಲ್ಲ, ಇಲ್ಲಿದೆ ಈ ಕುರಿತ ಲೇಟೆಸ್ಟ್ ವಿವರ...

ನವದೆಹಲಿ[ಏ.02]: ಮಹಿಳೆ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭಾರತ ತಂಡದ ಆಟಗಾರರಾದ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್. ರಾಹುಲ್ ರಿಗೆ ವಿಚಾರಣೆಗೆ ಹಾಜರಾಗುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನಿಖಾಧಿಕಾರಿ ನಿವೃತ್ತ ನ್ಯಾಯಾಮೂರ್ತಿ ಡಿ.ಕೆ. ಜೈನ್ ನೋಟಿಸ್ ನೀಡಿದ್ದಾರೆ.

ಕಾಫಿ ವಿವಾದ: ಪಾಂಡ್ಯ ರಾಹುಲ್‌ ವಿರುದ್ಧ ದೂರು!

‘ಕಾಫಿ ವಿತ್ ಕರಣ್’ ಖಾಸಗಿ ಟೀವಿ ಶೋನಲ್ಲಿ ಈ ಇಬ್ಬರೂ ಆಟಗಾರರು ಮಹಿಳೆಯರ ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು. ಈ ಕುರಿತು ಸಾಮಾಜಿಕ ಜಾಲ ತಾಣಗಳಲ್ಲಿ ತೀವ್ರ ಟೀಕೆಗಳು ವ್ಯಕ್ತವಾಗಿದ್ದವು. 2018ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಮುನ್ನ ಹಾರ್ದಿಕ್ ಪಾಂಡ್ಯ-ಕೆ.ಎಲ್ ರಾಹುಲ್ ಸೆಕ್ಸಿ ಕಾಮೆಂಟ್ ಮಾಡುವ ವ್ಯಾಪಕ ಟೀಕೆಗೆ ಗುರಿಯಾಗಿದ್ದು ಮಾತ್ರವಲ್ಲದೇ ಆಸಿಸ್ ಪ್ರವಾಸದಿಂದಲೂ ಹೊರಗುಳಿದಿದ್ದರು. ಇದಷ್ಟೇ ಅಲ್ಲದೇ ಈ ಇಬ್ಬರು ಕ್ರಿಕೆಟಿಗರು ಬೇಷರತ್ತು ಕ್ಷಮೆಯನ್ನು ಕೇಳಿದ್ದರು. 

’ಕಾಫಿ ವಿತ್ ಕರುಣ್’: ಇದೇ ಮೊದಲ ಬಾರಿಗೆ ತುಟಿ ಬಿಚ್ಚಿದ ಕರುಣ್ ಹೇಳಿದ್ದೇನು?

ಪ್ರಸ್ತುತ 12ನೇ ಆವೃತ್ತಿಯ ಐಪಿಎಲ್’ನಲ್ಲಿ ಕೆ.ಎಲ್ ರಾಹುಲ್ ಕಿಂಗ್ಸ್ ಇಲೆವನ್ ಪಂಜಾಬ್ ತಂಡವನ್ನು ಪ್ರತಿನಿಧಿಸುತ್ತಿದ್ದರೆ, ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡದ ಪರ ಕಣಕ್ಕಿಳಿದಿದ್ದಾರೆ.  

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ ಇಂಗ್ಲೆಂಡ್ ಸೆಮೀಸ್‌ನಲ್ಲಿ 34 ಸಿಕ್ಸರ್, ಟಿ20 ವಿಶ್ವಕಪ್ ಇತಿಹಾಸದಲ್ಲೇ ದಾಖಲೆ
18ನೇ ಓವರ್‌ನಲ್ಲಿ ಸುಳಿವು, ಕೊನೆಯಲ್ಲಿ ತಿರುವು, ಇಂಗ್ಲೆಂಡ್ ಮಣಿಸಿ ಫೈನಲ್‌ ಪ್ರವೇಶಿಸಿದ ಭಾರತ