
ನವದೆಹಲಿ[ಅ.05]: 2016ರ ರಿಯೋ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದಿದ್ದ ಕುಸ್ತಿಪಟು ಸಾಕ್ಷಿ ಮಲಿಕ್ರನ್ನು ಟಾರ್ಗೆಟ್ ಒಲಿಂಪಿಕ್ ಪೋಡಿಯಂ ಯೋಜನೆ (ಟಾಫ್ಸ್)ಯಿಂದ ಕೈಬಿಡಲಾಗಿದೆ. ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್)ದ ಮಿಷನ್ ಒಲಿಂಪಿಕ್ ಸಮಿತಿ ಈ ನಿರ್ಧಾರ ಕೈಗೊಂಡಿದೆ.
ಹೇಳದೆ ಕೇಳದೆ ಶಿಬಿರ ತೊರೆದ ಸಾಕ್ಷಿಗೆ ಕುಸ್ತಿ ಫೆಡರೇಷನ್ ಚಾಟಿ!
ಇತ್ತೀಚೆಗೆ ಕಜಕಿಸ್ತಾನದಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಸಾಕ್ಷಿ ಮೊದಲ ಸುತ್ತಿನಲ್ಲೇ ಸೋಲುಂಡು ಹೊರಬಿದ್ದಿದ್ದರು. ರಿಯೋ ಗೇಮ್ಸ್ ಬಳಿಕ ಅವರ ಪ್ರದರ್ಶನ ತೀರಾ ಕಳಪೆಯಾಗಿದ್ದು, 2020ರ ಒಲಿಂಪಿಕ್ಸ್ನ ಪದಕ ಭರವಸೆಗಳ ಪಟ್ಟಿಯಿಂದ ಅವರನ್ನು ತೆಗೆದುಹಾಕಲಾಗಿದೆ.
ವಿಶ್ವ ಕುಸ್ತಿ ಕೂಟ: ಭಜರಂಗ್ಗೆ ಕಂಚು, ಸುಶೀಲ್ಗೆ ಶಾಕ್..!
ಸಾಕ್ಷಿ ಬದಲಿಗೆ ವಿಶ್ವ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಗೆದ್ದ ಯುವ ಕುಸ್ತಿಪಟು ರವಿ ದಹಿಯಾರನ್ನು ಟಾಪ್ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. ಟಾಪ್ ಯೋಜನೆಯಲ್ಲಿ ಸ್ಥಾನ ಪಡೆದಿರುವ ಕ್ರೀಡಾಪಟುಗಳ ತರಬೇತಿಗೆ ಕೇಂದ್ರ ಸರ್ಕಾರ ಮಾಸಿಕ 50,000 ರುಪಾಯಿ ನೆರವು ನೀಡಲಿದೆ.
ವಾಸೀಂ ಅಕ್ರಂ, ರಂಗನಾ ಹೆರಾತ್ ದಾಖಲೆ ಮುರಿದ ಜಡೇಜಾ!
ಕೆಲವು ದಿನಗಳ ಹಿಂದಷ್ಟೇ ಸಾಕ್ಷಿ ಹೇಳದೇ-ಕೇಳದೇ ಲಖನೌದಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರದಿಂದ ಹೊರಹೋಗಿ ಸುದ್ದಿಯಾಗಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.