
ದುಬೈ(ಸೆ.16): ಪಾಕಿಸ್ತಾನದಲ್ಲಿ ಸರಣಿ ಆಯೋಜಿಸಲು ಹಲವು ಅಡೆ ತಡೆ ಎದುರಿಸುತ್ತಿರುವ ಪಾಕಿಸ್ತಾನ, ಕಾಡಿ ಬೇಡಿ ಶ್ರೀಲಂಕಾ ತಂಡವನ್ನು ಒಪ್ಪಿಸಿದೆ. ಲಂಕಾದ ಹಿರಿಯ ಕ್ರಿಕೆಟಿಗರು ಬಹಿಷ್ಕಾರ ಹಾಕಿದ ಬೆನ್ನಲ್ಲೇ, ಪ್ರವಾಸಕ್ಕೆ ತಯಾರಿರುವ ಕ್ರಿಕೆಟಿಗರನ್ನು ಒಪ್ಪಿಸುವಲ್ಲಿ ಪಾಕಿಸ್ತಾನ ಯಶಸ್ವಿಯಾಗಿದೆ. ಎಲ್ಲವೂ ಸರಿಹೋಯ್ತು ಅನ್ನುವಷ್ಟರಲ್ಲಿ ಇದೀಗ ಐಸಿಸಿ ಮಧ್ಯಪ್ರವೇಶಿಸಿದೆ.
ಇದನ್ನೂ ಓದಿ: ಪಾಕಿಸ್ತಾನದಲ್ಲಿ ಕ್ರಿಕೆಟ್ ಸರಣಿ ಡೌಟ್; ನರಕ ಪ್ರವಾಸಕ್ಕೆ 10 ಲಂಕಾ ಕ್ರಿಕೆಟಿಗರ ನಕಾರ!
ಪಾಕಿಸ್ತಾನ-ಶ್ರೀಲಂಕಾ ನಡುವಿನ ಸರಣಿಗೆ ಪಿಸಿಬಿ(ಪಾಕ್ ಕ್ರಿಕೆಟ್ ಮಂಡಳಿ) ಸಕಲ ತಯಾರಿ ಮಾಡಿಕೊಂಡಿದೆ. ಗರಿಷ್ಠ ಭದ್ರತೆಗೆ ನೀಡುವುದಾಗಿ ಹೇಳಿದೆ. ಇದೀಗ ಐಸಿಸಿ ಭದ್ರತಾ ಪರಿಶೀಲನೆ ನಡೆಸಿದ ಬಳಿಕವಷ್ಟೇ ಗ್ರೀನ್ ಸಿಗ್ನಲ್ ನೀಡಲಿದೆ. ಸುರಕ್ಷತಾ ವಿಚಾರದಲ್ಲಿ ಐಸಿಸಿ ರಾಜಿಯಾಗುವುದಿಲ್ಲ. ಹೀಗಾಗಿ ಪಾಕಿಸ್ತಾನದ ಭದ್ರತೆ ಕುರಿತು ತೃಪ್ತಿಯಾದಲ್ಲಿ ಸರಣಿಗೆ ಅವಕಾಶ ನೀಡಲಿದ್ದೇವೆ ಎಂದು ಐಸಿಸಿ ಹೇಳಿದೆ.
ಇದನ್ನೂ ಓದಿ: ಭಾರತದ ಮೇಲೆ ಗೂಬೆ ಕೂರಿಸಿದ ಪಾಕ್ ಸಚಿವನಿಗೆ ಲಂಕಾ ಚಾಟಿ!
ಪಾಕಿಸ್ತಾನ ಹಾಗೂ ಶ್ರೀಲಂಕಾ 3 ಏಕದಿನ ಹಾಗೂ 3 ಟಿ20 ಪಂದ್ಯ ಆಡಲಿದೆ. ಸೆಪ್ಟೆಂಬರ್ 27 ರಿಂದ ಆಕ್ಟೋಬರ್ 9 ವರೆಗೆ ಸರಣಿ ನಡೆಯಲಿದೆ. ಕರಾಚಿ ಹಾಗೂ ಲಾಹೋರ್ನಲ್ಲಿ ಎಲ್ಲಾ ಪಂದ್ಯ ಆಯೋಜಿಸಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.