
ನವದೆಹಲಿ(ಸೆ.19): ಪ್ಯಾರಾಲಿಂಪಿಕ್ಸ್ ಪದಕ ವಿಜೇತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಪದಕ ಗೆದ್ದ ಎಲ್ಲರಿಗೂ ಮುಂದಿನ ವರ್ಷ ಖೇಲ್ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಕ್ರೀಡಾ ಸಚಿವ ವಿಜಯ್ ಗೋಯಲ್ ಘೋಷಿಸಿದ್ದಾರೆ.
ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಒಟ್ಟು 4 ಪದಕಗಳ ಸಿಕ್ಕಿವೆ. ಅದರಲ್ಲಿ ಎರಡು ಬಂಗಾರ, ಒಂದು ಬೆಳ್ಳಿ, ಒಂದು ಕಂಚು ದೊರೆತಿದ್ದು, ನಾಲ್ವರಿಗೂ ಮುಂದಿನ ವರ್ಷ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಅಂತ ತಿಳಿಸಿದ್ದಾರೆ.
ಪ್ಯಾರಾಲಿಂಪಿಕ್ಸ್'ನಲ್ಲಿ ಹೈಜಂಪ್'ನಲ್ಲಿ ಭಾರತದ ಮರಿಯಪ್ಪನ್ ತಂಗವೇಲು(ಚಿನ್ನ), ವರುಣ್ ಭಾಟಿ(ಕಂಚು) ಪದಕಗಳಿಗೆ ಕೊರಳೊಡ್ಡಿದರೆ, ದೀಪಾ ಮಲಿಕ್ ಶಾಟ್'ಪುಟ್'ನಲ್ಲಿ ಬೆಳ್ಳಿಪದಕ ಗೆದ್ದಿದ್ದಾರೆ. ಇನ್ನು ಜಾವಲಿನ್ ಥ್ರೋನಲ್ಲಿ ದೇವೇಂದ್ರ ಜಜೂರಿಯಾ ವಿಶ್ವದಾಖಲೆ ನಿರ್ಮಿಸುವುದರೊಂದಿಗೆ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಈ ಸಾಧಕರೆಲ್ಲರೂ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.