
ಕಿಂಗ್ಸ್ XI ಪಂಜಾಬ್ ತವರು ಮೈದಾನದಲ್ಲಿ ಮೇ 12 ಹಾಗೂ 14ರಂದು ನಡೆಯಲಿರುವ ಪಂದ್ಯದ ವೇಳಾಪಟ್ಟಿಯನ್ನು ಬದಲಾಯಿಸುವಂತೆ ಪಂಜಾಬ್ ಕ್ರಿಕೆಟ್ ಸಂಸ್ಥೆ ಬಿಸಿಸಿಐಗೆ ಮನವಿ ಮಾಡಿಕೊಂಡಿದೆ.
ಚಂಢೀಘಡ ವಿಮಾನ ನಿಲ್ದಾಣದ ನಿರ್ವಹಣಾ ಕಾರ್ಯವು ಮೇ 12ರಿಂದ 31ರವರೆಗೆ ನಡೆಯಲಿದ್ದು, ಈ ವೇಳೆ ಏರ್'ಪೋರ್ಟ್ ಬಂದ್ ಆಗುವ ಸಾಧ್ಯತೆಯಿದೆ, ಹೀಗಾಗಿ ಪಂಜಾಬ್ ಕ್ರಿಕೆಟ್ ಸಂಸ್ಥೆ(ಪಿಸಿಎ) ಐಪಿಎಲ್ ಟೂರ್ನಿಯಲ್ಲಿ ಈ 2 ಪಂದ್ಯಗಳ ವೇಳಾಪಟ್ಟಿಯನ್ನು ಬದಲಿಸುವಂತೆ ಮನವಿ ಮಾಡಿಕೊಂಡಿದೆ. ನಾವು ಪಿಸಿಎನಿಂದ ಮನವಿಯನ್ನು ಸ್ವೀಕರಿಸಿದ್ದೇವೆ. ನೈಜ ಸಮಸ್ಯೆಯಾಗಿರುವುದರಿಂದ ಐಪಿಎಲ್ ಆಡಳಿತ ಮಂಡಳಿ ಈ ಬಗ್ಗೆ ಗಮನ ಹರಿಸಲಿದೆ ಎಂದು ಬಿಸಿಸಿಐ ಕಾರ್ಯನಿರ್ವಾಹಕ ಅಧ್ಯಕ್ಷ ಸಿ.ಕೆ. ಖನ್ನಾ ತಿಳಿಸಿದ್ದಾರೆ.
ಕಿಂಗ್ಸ್ XI ಪಂಜಾಬ್ ತಂಡವು ಈಗಿರುವ ವೇಳಾಪಟ್ಟಿಯಂತೆ ತವರು ಮೈದಾನದಲ್ಲಿ ಮೇ 12ರಂದು ಕೋಲ್ಕತಾ ನೈಟ್ ರೈಡರ್ಸ್ ಎದುರಿಸಲಿದೆ. ಇನ್ನು ಮೇ 14ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದೆದುರು ಸೆಣಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.