
ಕರಾಚಿ(ಅ.23): ನಷ್ಟ ಪರಿಹಾರ ಕೋರಿ ಬಿಸಿಸಿಐ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದ್ದ ಪಾಕಿಸ್ತಾನ ಕ್ರಿಕೆಟ್ ಸಂಸ್ಥೆ (ಪಿಸಿಬಿ) ಅದರಿಂದ ಹಿಂದೆ ಸರಿಯಲು ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.
ಒಪ್ಪಂದದ ಪ್ರಕಾರ ಭಾರತ 2015ರಿಂದ 2023ರ ಅವಧಿಯೊಳಗೆ ಪಾಕ್ ವಿರುದ್ಧ ಒಟ್ಟು 6 ದ್ವಿಪಕ್ಷೀಯ ಸರಣಿ ಆಡಬೇಕಿತ್ತು. ಆದರೆ, ರಾಜಕೀಯ ಕಾರಣಗಳಿಂದ ಭಾರತ ಇದರಿಂದ ಹಿಂದೆ ಸರಿದಿತ್ತು.
ಈ ಹಿನ್ನೆಲೆಯಲ್ಲಿ ನಷ್ಟ ಪರಿಹಾರ ಕೋರಿ ಬಿಸಿಸಿಐ ವಿರುದ್ಧ ಪ್ರಕರಣ ದಾಖಲಿಸಲು ಪಿಸಿಬಿ ಚಿಂತನೆ ನಡೆಸಿತ್ತು. ಆದರೆ, ಸರ್ಕಾರದ ಅನುಮತಿ ಲಭಿಸದ ಹೊರತು ಸರಣಿಯಲ್ಲಿ ಆಡುವುದು ಅಸಾಧ್ಯ ಎಂಬ ಅಂಶ ಒಪ್ಪಂದಲ್ಲಿ ಇರುವುದರಿಂದ, ಪ್ರಕರಣ ದಾಖಲಿಸಿದರೂ ಯಾವುದೇ ಪ್ರಯೋಜನ ಇಲ್ಲ ಎಂಬುದು ಪಿಸಿಬಿಗೆ ಮನವರಿಕೆಯಾದ ಕಾರಣ ತನ್ನ ನಿರ್ಧಾರದಿಂದ ಹಿಂದೆ ಸರಿಯಲು ತೀರ್ಮಾನಿಸಿದೆ ಎನ್ನಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.