
ಕರಾಚಿ(ಸೆ.30): ಭಾರತ ದ್ವಿಪಕ್ಷೀಯ ಸರಣಿಗಳನ್ನು ಆಡದ ಕಾರಣ ತನಗೆ ಆರ್ಥಿಕವಾಗಿ ನಷ್ಟ ಉಂಟಾಗಿದೆ. ಹಾಗಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ₹ 456.99 ಕೋಟಿ ಪರಿಹಾರ ನೀಡಬೇಕೆಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಆಗ್ರಹಿಸಿದೆ.
ನಷ್ಟ ಪರಿಹಾರಕ್ಕಾಗಿ ಬಿಸಿಸಿಐ ವಿರುದ್ಧ ಪ್ರಕರಣ ದಾಖಲಿಸುವ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲಿ ದೂರು ದಾಖಲಿಸುವುದಾಗಿ ಪಿಸಿಬಿ ತಿಳಿಸಿದೆ.
‘2014ರಲ್ಲಿ ಬಿಸಿಸಿಐ ದ್ವಿಪಕ್ಷೀಯ ಸರಣಿ ಆಡುವುದಾಗಿ ಪಿಸಿಬಿಯೊಂದಿಗೆ ಒಪ್ಪಂದ ಮಾಡಿಕೊಂಡಿತ್ತು. ಈ ಒಪ್ಪಂದದ ಪ್ರಕಾರ ಭಾರತ 2015ರಿಂದ 2023ರ ಅವಧಿಯಲ್ಲಿ ಪಾಕ್ ನೆಲದಲ್ಲಿ 6 ಕ್ರಿಕೆಟ್ ಸರಣಿಗಳನ್ನು ಆಡಬೇಕಿದ್ದು, ಒಂದೂ ಸರಣಿಯನ್ನು ಆಡಿಲ್ಲ. ಇದರಿಂದ ನಮಗೆ ಕೋಟ್ಯಂತರ ರು. ನಷ್ಟ ಉಂಟಾಗಿದೆ. ಐಸಿಸಿ ಪಂದ್ಯಾವಳಿಗಳಲ್ಲಿ ಮಾತ್ರ ಭಾರತ, ಪಾಕ್ ವಿರುದ್ಧ ಪಂದ್ಯಗಳನ್ನು ಆಡುತ್ತಿದ್ದು ಇದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿಲ್ಲ’ ಎಂದು ಪಿಸಿಬಿ ಅಧ್ಯಕ್ಷ ನಜಾಮ್ ಸೇಥಿ ದೂರಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.