
ಪಣಜಿ(ಸೆ.19): ಇದೇ ಅ. 6ರಿಂದ ಆರಂಭವಾಗಲಿರುವ ಫಿಫಾ 17 ವರ್ಷದೊಳಗಿನವರ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಮಿಡ್ ಫೀಲ್ಡರ್ ಅಮರ್'ಜಿತ್ ಸಿಂಗ್ ಮುನ್ನಡೆಸಲಿದ್ದಾರೆ.
ಭಾರತ ತಂಡದ ಕೋಚ್ ಲೂಯಿಸ್ ನಾರ್ಟನ್ ಡೆ ಮಟೋಸ್ ತಂಡದಲ್ಲಿನ 27 ಆಟಗಾರರಲ್ಲಿ ನಾಲ್ವರು ಆಟಗಾರರನ್ನು ನಾಯಕರನ್ನಾಗಿ ನೇಮಿಸಬಹುದು ಎಂದು ಅಭಿಪ್ರಾಯಪಟ್ಟಿದ್ದರು. ತಂಡದಲ್ಲಿನ ಎಲ್ಲ ಆಟಗಾರರು ಅಮರ್'ಜಿತ್ ಅವರಿಗೆ ಮತ ಚಲಾಯಿಸುವ ಮೂಲಕ ಆಯ್ಕೆ ಮಾಡಲಾಯಿತು. ಎರಡನೇ ಸ್ಥಾನ ಪಡೆದ ಜಿತೇಂದರ್ ಸಿಂಗ್ ಉಪನಾಯಕರಾಗಿದ್ದಾರೆ.
ಇನ್ನು 16 ವರ್ಷದೊಳಗಿನ ಎಎಫ್'ಸಿ ಚಾಂಪಿಯನ್'ಶಿಪ್'ನಲ್ಲಿ ಭಾರತ ತಂಡದ ನಾಯಕರಾಗಿದ್ದ ಸುರೇಶ್ ಸಿಂಗ್ 3ನೇ ಸ್ಥಾನ ಪಡೆದಿದ್ದರೆ, ಡಿಫೆಂಡರ್ ಸಂಜೀವ್ ಸ್ಟಾಲೀನ್ 4ನೇ ಸ್ಥಾನ ಪಡೆದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.