
ಹುಬ್ಬಳ್ಳಿ[ಆ.22]: ಕರ್ನಾಟಕ ಪ್ರೀಮಿಯರ್ ಲೀಗ್ ವೀಕ್ಷಿಸಲು ಬಂದಿದ್ದ ವೀಕ್ಷಕನ ಬಳಿ 17 ಸಾವಿರ ರುಪಾಯಿ ಹಣ ವಸೂಲಿ ಮಾಡಿದ ಆರೋಪದಡಿ ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್ಐ ಮಹೇಶ್ ಕುರ್ತಕೋಟಿ ಅವರನ್ನು ಅಮಾನತು ಮಾಡಲಾಗಿದೆ.
ಹುಬ್ಬಳ್ಳಿಯಲ್ಲಿ ಎರಡನೇ ಚರಣದ ಕೆಪಿಎಲ್ ಟೂರ್ನಿ ಆರಂಭಗೊಂಡಿದ್ದು, ಪಂದ್ಯ ವೀಕ್ಷಿಸಲು ಬಂದಿದ್ದ ಉತ್ತರಭಾರತ ಮೂಲದ ವ್ಯಕ್ತಿಯೋರ್ವನಿಂದ ಎಎಸ್ಐ ಮಹೇಶ್ ಕುರ್ತಕೋಟಿ 17 ಸಾವಿರ ರುಪಾಯಿ ವಸೂಲಿ ಮಾಡಿದ್ದಾರೆ ಎನ್ನಲಾಗಿದೆ.
ಹೀಗಾಗಿ ಎಎಸ್ಐ ಮಹೇಶ್ ಕುರ್ತಕೋಟಿ ಜತೆಗೆ ಪೇದೆಗಳಾದ,ಬಸವರಾಜ ಬಾವಿಹಾಳು ಅಬಯ್ ಕಟ್ನಳ್ಳಿ, ಮಂಜುನಾಥ ಏಣಗಿ ಅವರನ್ನು ಅಮಾನತು ಮಾಡಲಾಗಿದೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎಮ್.ಎನ್ ನಾಗರಾಜ್ ಅದೇಶ ಹೊರಡಿಸಿದ್ದು, ಈ ಎಲ್ಲಾ ಪೊಲೀಸರ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.