ರಾಷ್ಟ್ರಪತಿಯಿಂದ ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ ಕೊಹ್ಲಿ

Published : Sep 25, 2018, 05:47 PM IST
ರಾಷ್ಟ್ರಪತಿಯಿಂದ ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ ಕೊಹ್ಲಿ

ಸಾರಾಂಶ

ಏಷ್ಯಾಕಪ್ ಟೂರ್ನಿಯಿಂದ ವಿಶ್ರಾಂತಿ ಪಡೆದಿರುವ ನಾಯಕ ವಿರಾಟ್ ಕೊಹ್ಲಿ, ಇದೀಗ ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿರುವ ಕ್ರೀಡಾ ಸಾಧಕರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. ಕೊಹ್ಲಿಗೆ ರಾಷ್ಟ್ರಪತಿ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು.

ನವದೆಹಲಿ(ಸೆ.25): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 2018ರ ಕ್ರೀಡಾ ಕ್ಷೇತ್ರದ ಅತ್ಯುನ್ನತ ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿರುವ ಕ್ರೀಡಾ ಸಾಧಕರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಕೊಹ್ಲಿ ಪ್ರಶಸ್ತಿ ಪ್ರಧಾನ ಮಾಡಿದರು.

 

 

ವಿರಾಟ್ ಕೊಹ್ಲಿ ಜೊತೆ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕೂಡ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.   ಮಹಿಳಾ ವೇಟ್‌ಲಿಫ್ಟರ್ ಮೀರಾ ಭಾಯಿ ಚಾನು ಖೇಲ್ ರತ್ನ ಪ್ರಶಸ್ತಿ ಪಡೆದಿದ್ದಾರೆ. ಕಾಮನ್ ವೆಲ್ಸ್, ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಜಾವಲಿನ್ ಥ್ರೋವರ್ ನೀರಜ್ ಚೋಪ್ರಾ, ಓಟಗಾರ್ತಿ ಹಿಮಾ ದಾಸ್, ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂದಾನ, ಕನ್ನಡಿಗ ಟೆನಿಸ್ ಪಟು ರೋಹನ್ ಬೋಪಣ್ಣ ಸೇರಿದಂತೆ 20 ಕ್ರೀಡಾಪಟುಗಳು ಅರ್ಜುನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 

 

 

ಬಾಕ್ಸಿಂಗ್ ಕೋಚ್ ಕನ್ನಡಿಗ ಚೆನಂದ ಅಚ್ಚಯ್ಯ ಕುಟ್ಟಪ್ಪ, ವೇಟ್‌ಲಿಫ್ಟರ್ ಕೋಚ್ ವಿಜಯ್ ಶರ್ಮಾ ಸೇರಿದಂತೆ 8 ಮಾರ್ಗದರ್ಶಕರು ದ್ರೋಣಾಚಾರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಎಲ್ಲರಿಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆ ಸ್ಟಾರ್ ಆಲ್‌ರೌಂಡರ್‍‌ನ‌ ತ್ಯಾಗದ ಜೊತೆಗೆ 10 ಕೋಟಿ ಆಫರ್! ಆದ್ರೂ ಚೆನ್ನೈ ಪ್ಲಾನ್‌ಗೆ ಶಾಕ್ ಕೊಟ್ಟ ಮುಂಬೈ
IND vs ZIM 2nd T20I: ಹೊಸ ಚಾನೆಲ್‌ನಲ್ಲಿ ನೇರ ಪ್ರಸಾರ, ಆದ್ರೆ ಭಾರತ-ಜಿಂಬಾಬ್ವೆ ಮ್ಯಾಚ್ ಫ್ರೀ ಆಗಿ ವೀಕ್ಷಿಸೋದು ಹೇಗೆ? ಇಲ್ಲಿದೆ ಡೀಟೈಲ್ಸ್