ತಮಿಳ್ ತಲೈವಾಸ್‌ಗೆ ತಲೆಬಾಗಿದ ತೆಲುಗು ಟೈಟಾನ್ಸ್‌

Published : Nov 21, 2018, 09:36 AM IST
ತಮಿಳ್ ತಲೈವಾಸ್‌ಗೆ ತಲೆಬಾಗಿದ ತೆಲುಗು ಟೈಟಾನ್ಸ್‌

ಸಾರಾಂಶ

ಪ್ರೊ ಕಬಡ್ಡಿ ಟೂರ್ನಿಯಲ್ಲಿ ತಮಿಳ್ ತಲೈವಾಸ್ ಹಾಗೂ ತೆಲುಗು ಟೈಟಾನ್ಸ್ ನಡುವಿನ ಪಂದ್ಯ  ರೋಚಕ ಹೋರಾಟಕ್ಕೆ ಸಾಕ್ಷಿಯಾಯಿತು. ಕನ್ನಡಿಗ ಸುಕೇಶ್ ಹೆಗ್ಡೆ ಹಾಗೂ ಅಜಯ್ ಠಾಕೂರ್ ಹೋರಾಟ ತಮಿಳ್ ತಲೈವಾಸ್ ತಂಡಕ್ಕೆ ಗೆಲುವು ತಂದುಕೊಟ್ಟಿತು. ಇಲ್ಲಿದೆ ಪಂದ್ಯದ ಹೈಲೈಟ್ಸ್.

ಅಹಮ್ಮದಾಬಾದ್(ನ.21): ಅನುಭವಿಗಳಾದ ಅಜಯ್‌ ಠಾಕೂರ್‌ ಹಾಗೂ ಸುಖೇಶ್‌ ಹೆಗ್ಡೆ ಅವರ ಜವಾಬ್ದಾರಿಯುತ ಆಟದ ನೆರವಿನಿಂದ ತಮಿಳ್‌ ತಲೈವಾಸ್‌, ಪ್ರೊ ಕಬಡ್ಡಿ 6ನೇ ಲೀಗ್‌ನ 72ನೇ ಪಂದ್ಯದಲ್ಲಿ ತೆಲುಗು ಟೈಟಾನ್ಸ್‌ ವಿರುದ್ಧ 27-23 ಅಂಕಗಳ ರೋಚಕ ಜಯ ಸಾಧಿಸಿತು.

ಕನ್ನಡಿಗ ಸುಖೇಶ್‌ ಹೆಗ್ಡೆ ಚೊಚ್ಚಲ ರೈಡ್‌ನಲ್ಲೇ 2 ಅಂಕ ಗಳಿಸುವ ಮೂಲಕ ತಮಿಳ್‌ ತಲೈವಾಸ್‌ಗೆ ಉತ್ತಮ ಆರಂಭ ನೀಡಿದರು. ನೀಲೇಶ್‌ ಸಾಳುಂಕೆ, ತೆಲುಗು ಟೈಟಾನ್ಸ್‌ ಖಾತೆ ತೆರೆದರು. ಉಭಯ ತಂಡಗಳ ಆಟಗಾರರು ಆಕ್ರಮಣಕಾರಿ ಆಟಕ್ಕಿಂತ ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದರು. ಪರಿಣಾಮ ಅಂಕ ಗಳಿಕೆಗೆ ಎರಡು ತಂಡಗಳು ಸಾಕಷ್ಟುಪ್ರಯಾಸಪಟ್ಟವು. ಈ ವೇಳೆ ಅಜಯ್‌, ಸುಖೇಶ್‌, ಅತುಲ್‌ ನಿಧಾನವಾಗಿ ಒಂದೊಂದೇ ಅಂಕ ಕಲೆ ಹಾಕುತ್ತಾ ಸಾಗಿದರು. ಪಂದ್ಯದ 16ನೇ ನಿಮಿಷದಲ್ಲಿ ಸೂಪರ್‌ ರೈಡ್‌ನಲ್ಲಿ ಮೂವರನ್ನು ಬಲಿ ಪಡೆದ ಅಜೇಯ್‌ ಠಾಕೂರ್‌, ತಂಡದ ಮುನ್ನಡೆಯನ್ನು 13-6ಕ್ಕೇರಿಸಿದರು. ಅಲ್ಲದೇ 17ನೇ ನಿಮಿಷದಲ್ಲಿ ಟೈಟಾನ್ಸ್‌ ಅನ್ನು ಆಲೌಟ್‌ ಮಾಡಿದ ತಲೈವಾಸ್‌ 17-9 ಮುನ್ನಡೆ ಸಾಧಿಸಿತು, ಮೊದಲಾರ್ಧಕ್ಕೆ 18-10ರಿಂದ ಮುನ್ನಡೆ ಹೊಂದಿತ್ತು.

ದ್ವಿತೀಯಾರ್ಧದಲ್ಲಿ ಪಂದ್ಯ ಮತ್ತಷ್ಟುಬಿಗಿಯಾಗ ತೊಡಗಿತು. ಅದರಲ್ಲೂ ಟೈಟಾನ್ಸ್‌ ಆಟಗಾರರು ಅಜಯ್‌, ಸುಖೇಶ್‌ರನ್ನು ಕಟ್ಟಿಹಾಕುವ ಮೂಲಕ ತಿರುಗೇಟು ನೀಡುವ ಲಕ್ಷಣ ತೋರಿದರು. ದ್ವಿತೀಯಾರ್ಧದಲ್ಲಿ ಲಯಕ್ಕೆ ಮರಳಿದ ರಾಹುಲ್‌ ಚೌಧರಿ ತಂಡದ ಹೋರಾಟಕ್ಕೆ ಜೀವ ತುಂಬಿದರು. ಆದರೆ, ಅನುಭವಿ ಮಂಜೀತ್‌ ಚಿಲ್ಲಾರ್‌ರ ತಂತ್ರಗಾರಿಕೆ ಹಾಗೂ ಮಾರ್ಗದರ್ಶನ ತಲೈವಾಸ್‌ಗೆ ಫಲ ನೀಡಿತು. ಅಂತಿಮವಾಗಿ ಜಯ ಅಜಯ್‌ ಠಾಕೂರ್‌ ತಂಡಕ್ಕೆ ಒಲಿಯಿತು.

ಟರ್ನಿಂಗ್‌ ಪಾಯಿಂಟ್‌: 17ನೇ ನಿಮಿಷದಲ್ಲಿ ಟೈಟಾನ್ಸ್‌ ಅನ್ನು ಆಲೌಟ್‌ ಮಾಡಿ ಮೊದಲಾರ್ಧದ ವೇಳೆ 18-10 ಮುನ್ನಡೆ ಕಾಯ್ದುಕೊಂಡಿದ್ದು ತಲೈವಾಸ್‌ ಆತ್ಮವಿಶ್ವಾಸವನ್ನು ದುಪ್ಪಟುಗೊಳಿಸಿತು. ತಲೈವಾಸ್‌ ಆಟಗಾರರು ಆಕ್ರಮಣಕಾರಿ ಆಟಕ್ಕಿಂತ ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದ್ದು, ತಂಡದ ಗೆಲುವಿಗೆ ಪ್ರಮುಖ ಕಾರಣವಾಯಿತು.

ವಿನಯ್‌ ಕುಮಾರ್‌ ಡಿ.ಬಿ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಪ್‌ ತುಳಿತ ತನಿಖಾ ವರದಿ ಹೈಕೋರ್ಟ್‌ ಪರಾಮರ್ಶೆಗೆ
ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!