Pro Kabaddi 2025: ಗೆಲುವಿನ ಹಳಿಗೆ ಮರಳಿದ ಬೆಂಗಳೂರು ಬುಲ್ಸ್!

Published : Sep 23, 2025, 09:06 AM IST
Bengaluru Bulls

ಸಾರಾಂಶ

ಗುಜರಾತ್ ಜೈಂಟ್ಸ್ ವಿರುದ್ಧದ ಹೈವೋಲ್ಟೇಜ್ ಕಬಡ್ಡಿ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ 28-24 ಅಂಕಗಳಿಂದ ಜಯಭೇರಿ ಬಾರಿಸಿದೆ. ಈ ಮೂಲಕ ಸತತ ಸೋಲಿನ ಬಳಿಕ ಗೆಲುವಿನ ಹಳಿಗೆ ಮರಳಿದ ಬುಲ್ಸ್, ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದೆ.

ಜೈಪುರ: ರಕ್ಷಣಾತ್ಮಕ ಆಟಕ್ಕೆ ಸಾಕ್ಷಿಯಾದ ಬೆಂಗಳೂರು ಬುಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವಿನ ಹೈವೋಲ್ವೇಜ್ ಹಣಾಹಣಿಯಲ್ಲಿ ಮಾಜಿ ಚಾಂಪಿಯನ್ ಬುಲ್ಸ್ ತಂಡ 28-24 ಅಂಕಗಳಿಂದ ಜಯಭೇರಿ ಬಾರಿಸಿತು. ಆ ಮೂಲಕ ಈ ಆವೃತ್ತಿಯಲ್ಲಿ 5ನೇ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿಯಿತು.

ಮೊದಲ 3 ಪಂದ್ಯಗಳಲ್ಲಿ ಸೋಲುಂಡಿದ್ದ ಬುಲ್ಸ್, ಆ ಬಳಿಕ ಸತತ 4 ಜಯ ಸಾಧಿಸಿತ್ತು. ಆದರೆ ಕಳೆದ ಪಂದ್ಯದಲ್ಲಿ ತಂಡ ಸೋಲುಂಡಿತ್ತು. ಇದೀಗ ಜಯದ ಹಳಿಗೆ ವಾಪಸಾಗಿದೆ. ಇದೇ ವೇಳೆ ಜೈಂಟ್ಸ್ 6ನೇ ಸೋಲಿಗೆ ಗುರಿಯಾಗಿ ಕೊನೆ ಸ್ಥಾನದಲ್ಲಿದೆ. ಮೊದಲಾರ್ಧದಲ್ಲಿ 2 ಬಾರಿ ಆಲೌಟ್ ಆಗುವುದನ್ನು ತಪ್ಪಿಸಿಕೊಂಡ ಬುಲ್ಸ್ 20 ನಿಮಿಷಗಳ ಆಟದ ಮುಕ್ತಾಯಕ್ಕೆ 17-13ರ ಮುನ್ನಡೆ ಗಳಿಸಿತು. ದ್ವಿತೀಯಾರ್ಧದಲ್ಲೂ ಉತ್ತಮ ಡಿಫೆನ್ಸ್ ಪ್ರದರ್ಶಿಸಿದ ಬುಲ್ಸ್ 4 ಅಂಕಗಳ ಜಯ ಸಾಧಿಸಿತು.

ಬೆಂಗಳೂರು ಬುಲ್ಸ್ ಪರ ರೈಡರ್ ಆಕಾಶ್ ಶಿಂಧೆ 7 ಅಂಕ ಗಳಿಸಿದರೆ, ನಾಯಕ ಯೋಗೇಶ್ 6 ಟ್ಯಾಕಲ್ ಅಂಕ ಪಡೆದರು. ಬುಲ್ಸ್ ತನ್ನ ಮುಂದಿನ ಪಂದ್ಯವನ್ನು ಸೆ.25ರಂದು ಯು.ಪಿ. ಯೋಧಾಸ್ ವಿರುದ್ಧ ಆಡಲಿದೆ. ಸೋಮವಾರದ 2ನೇ ಪಂದ್ಯದಲ್ಲಿ ತಮಿಳ್ ತಲೈವಾಸ್ ವಿರುದ್ಧ ಯು.ಪಿ. ಯೋಧಾಸ್ 39-22 ಅಂಕಗಳಲ್ಲಿ ಜಯಿಸಿತು.

ಅ.1ಕ್ಕೆ ಮುಂಬೈಗೆ ಬೋಲ್ಡ್

ಮುಂಬೈ: ಅ.1ರಂದು ಮುಂಬೈನಲ್ಲಿ ನಡೆಯಲಿರುವ ಬಿಎಫ್‌ಸಿ ಮತ್ತು ಮುಂಬೈ ಸಿಟಿ ಎಫ್‌ಸಿ ನಡುವಿನ ಪ್ರದರ್ಶನ ಫುಟ್ಬಾಲ್ ಪಂದ್ಯದಲ್ಲಿ ಭಾಗಿಯಾಗಲು ತಾರಾ ಓಟಗಾರ ಉಸೇನ್‌ ಬೋಲ್ಟ್ ಭಾರತಕ್ಕೆ ಬರಲಿದ್ದಾರೆ. ಪೂಮಾ ಆಯೋಜಿಸುತ್ತಿರುವ ಈ ಪಂದ್ಯಗಳು ಸೆ.30ರಿಂದ ಆರಂಭವಾಗಲಿದ್ದು, ಜಮೈಕಾದ ತಾರೆ ಅ.1ರಂದು ಉಭಯ ತಂಡಗಳ ಪರ ತಲಾ ಅರ್ಧ ಅವಧಿಗೆ ಆಡಲಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಬೋಲ್ಟ್ ಜತೆಗೆ ಅನೇಕ ಫುಟ್ಬಾಲ್ ತಾರೆಗಳು, ಬಾಲಿವುಡ್ ಕಲಾವಿದರ ಭಾಗವಹಿಸಲಿದ್ದಾರೆ.

ಇಂದಿನಿಂದ ಕೊರಿಯಾ ಓಪನ್: ಕನ್ನಡಿಗ ಆಯುಷ್ ಮೇಲೆ ಹೆಚ್ಚಿನ ನಿರೀಕ್ಷೆ

ಸುವೊನ್ (ಕೊರಿಯಾ): ಮಂಗಳವಾರ ಇಲ್ಲಿ ಆರಂಭಗೊ ಳ್ಳಲಿರುವ ಕೊರಿಯಾ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕರ್ನಾಟಕದ ಆಯುಷ್‌ ಶೆಟ್ಟಿ ಹಾಗೂ ತಾರಾ ಶಟ್ಲರ್ ಎಚ್.ಎಸ್.ಪ್ರಣಯ್, ಭಾರತದ ಸವಾಲನ್ನು ಮುನ್ನಡೆಸಲಿದ್ದಾರೆ. ಮಹಿಳೆಯರ ವಿಭಾಗದಲ್ಲಿ ಅನುಪಮಾ ಉಪಾಧ್ಯಾಯ ಮೇಲೆ ನಿರೀಕ್ಷೆ ಇಡಲಾಗಿದೆ. ಸಾತ್ವಿಕ್ -ಚಿರಾಗ್ ಈ ಟೂರ್ನಿಗೆ ಗೈರಾಗಲಿದ್ದಾರೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

20 ಮ್ಯಾಚ್ ಬಳಿಕ ಕೊನೆಗೂ ಟಾಸ್ ಗೆದ್ದ ಭಾರತ! ದಕ್ಷಿಣ ಆಫ್ರಿಕಾ ತಂಡದಲ್ಲಿ 2 ಬದಲಾವಣೆ!
ಭಾರತ ಎದುರಿನ 3ನೇ ಏಕದಿನ ಪಂದ್ಯಕ್ಕೂ ಮುನ್ನ ದಕ್ಷಿಣ ಆಫ್ರಿಕಾಗೆ ಬಿಗ್ ಶಾಕ್! 2 ಸ್ಟಾರ್ ಆಟಗಾರರು ಔಟ್!