
ಮುಂಬೈ[ಡಿ.22]: ಭಾರತ ಮಹಿಳಾ ಕ್ರಿಕೆಟ್ ತಂಡದ ಕೋಚ್ ಆಗಿ ವೊರ್ಕೆರಿ ರಾಮನ್ರನ್ನು ನೇಮಿಸಿದ್ದಕ್ಕೆ ಸುಪ್ರೀಂ ಕೋರ್ಟ್ ನೇಮಿತ ಬಿಸಿಸಿಐ ಆಡಳಿತ ಸಮಿತಿ ಮುಖ್ಯಸ್ಥ ವಿನೋದ್ ರಾಯ್ ವಿರುದ್ಧ ಆಡಳಿತ ಸಮಿತಿ ಸದಸ್ಯೆ ಡಯಾನ ಎಡುಲ್ಜಿ ಆಕ್ರೋಶ ವ್ಯಕ್ತವಾಗಿದ್ದಾರೆ.
ಕೋಚ್ ಆಗಿ ರಮೇಶ್ ಪೊವಾರ್ ಅವರೇ ಮುಂದುವರಿಯಬೇಕು ಎಂದು ಡಯಾನ ಪಟ್ಟುಹಿಡಿದಿದ್ದರು. ಕೋಚ್ ಆಯ್ಕೆ ಪ್ರಕ್ರಿಯೆಯನ್ನು ‘ಹಾಸ್ಯಸ್ಪದ’ ಎಂದಿರುವ ಡಯಾನಗೆ ಬಿಸಿಸಿಐ ಹಂಗಾಮಿ ಕಾರ್ಯದರ್ಶಿ ಅಮಿತಾಭ್ ಚೌಧರಿ ಬೆಂಬಲಿಸಿದ್ದಾರೆ.
ಮೂಲಗಳ ಪ್ರಕಾರ, ಆಯ್ಕೆ ಸಮಿತಿ ಗ್ಯಾರಿ ಕರ್ಸ್ಟನ್ ಹೆಸರನ್ನು ಶಿಫಾರಸ್ಸು ಮಾಡಿತ್ತು. ಆದರೆ ಕರ್ಸ್ಟನ್, ಐಪಿಎಲ್ನಲ್ಲಿ ಆರ್ಸಿಬಿ ಕೋಚ್ ಹುದ್ದೆ ತ್ಯಜಿಸಲು ಸಿದ್ಧವಿಲ್ಲ ಎಂದು ಸ್ಪಷ್ಟಪಡಿಸಿದ ಕಾರಣ ಅವರನ್ನು ಪರಿಗಣಿಸಲಿಲ್ಲ ಎನ್ನಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.