ಭಾರತ ಮಣಿಸಲು ಐಡಿಯಾ ಹೇಳಿಕೊಟ್ಟ ಸ್ಮಿತ್..!

Published : Jun 09, 2017, 09:43 PM ISTUpdated : Apr 11, 2018, 12:40 PM IST
ಭಾರತ ಮಣಿಸಲು ಐಡಿಯಾ ಹೇಳಿಕೊಟ್ಟ ಸ್ಮಿತ್..!

ಸಾರಾಂಶ

ದಕ್ಷಿಣ ಆಫ್ರಿಕಾ ತಂಡದ ಯಶಸ್ವಿ ನಾಯಕ ಎನ್ನುವ ಖ್ಯಾತಿಗೆ ಪಾತ್ರವಾಗಿರುವ ಸ್ಮಿತ್, ಪ್ರಸ್ತುತ ಐಪಿಎಲ್ ಚಾಂಪಿಯನ್ಸ್ ಟ್ರೋಫಿಯಲ್ಲಿ ವೀಕ್ಷಕ ವಿವರಣೆಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಲಂಡನ್(ಜೂ.09): ಪಾಕಿಸ್ತಾನ ವಿರುದ್ಧ ಪಂದ್ಯವನ್ನು ಕೈಚೆಲ್ಲಿರುವ ಎಬಿ ಡಿವಿಲಿಯರ್ಸ್ ಪಡೆ ಸೆಮೀಸ್ ತಲುಪಲು ಭಾರತದ ವಿರುದ್ಧ ಗೆಲ್ಲಲೇ ಬೇಕಾದ ಒತ್ತಡದಲ್ಲಿ ಸಿಲುಕಿದೆ. ಹೀಗಾಗಿ ಇಂದು ದಕ್ಷಿಣ ಆಫ್ರಿಕಾ ತಂಡ ನೆಟ್ಸ್'ನಲ್ಲಿ ಸಾಕಷ್ಟು ಬೆವರು ಹರಿಸಿತು.

ಈ ವೇಳೆ ಹರಿಣಗಳ ಪಡೆಯ ಮಾಜಿ ನಾಯಕ ಗ್ರೇಮ್ ಸ್ಮಿತ್ ಆಟಗಾರರು ಅಭ್ಯಾಸ ನಡೆಸುವಲ್ಲಿಗೆ ಬಂದು ಸಾಕಷ್ಟು ಉಪಯುಕ್ತ ಸಲಹೆಗಳನ್ನು ನೀಡಿದರು.

ದಕ್ಷಿಣ ಆಫ್ರಿಕಾ ತಂಡದ ಯಶಸ್ವಿ ನಾಯಕ ಎನ್ನುವ ಖ್ಯಾತಿಗೆ ಪಾತ್ರವಾಗಿರುವ ಸ್ಮಿತ್, ಪ್ರಸ್ತುತ ಐಪಿಎಲ್ ಚಾಂಪಿಯನ್ಸ್ ಟ್ರೋಫಿಯಲ್ಲಿ ವೀಕ್ಷಕ ವಿವರಣೆಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸ್ಮಿತ್ ತಮ್ಮ ವೈಯುಕ್ತಿಕ ಕೆಲಸಗಳನ್ನೆಲ್ಲಾ ಬದಿಗೊತ್ತಿ ಎಬಿ ಡಿವಿಲಿಯರ್ಸ್ ಪಡೆಗೆ ಭಾರತ ವಿರುದ್ಧದ ಪಂದ್ಯಕ್ಕೆ ತಂತ್ರಗಾರಿಕೆ ಹೇಳಿಕೊಟ್ಟಿದ್ದಾರೆ.  

ಈ ಮೊದಲು ಶ್ರೀಲಂಕಾ- ಭಾರತ ನಡುವಿನ ಪಂದ್ಯಕ್ಕೂ ಲಂಕಾ ಆಟಗಾರರು ಅಭ್ಯಾಸ ನಡೆಸುತ್ತಿದ್ದ ವೇಳೆ ತಂಡದ ಮಾಜಿ ನಾಯಕ ಕುಮಾರ್ ಸಂಗಕ್ಕಾರ ಇದೇ ರೀತಿ ಆಟಗಾರರಿಗೆ ಹುರಿದುಂಬಿಸಿ, ಅವರೊಂದಿಗೆ ನೆಟ್ಸ್‌'ನಲ್ಲಿ ಕಾಲ ಕಳೆದಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Kabaddi Player: ಅಂತರರಾಷ್ಟ್ರೀಯ ಕಬಡ್ಡಿ ಆಟಗಾರನ ಪತ್ನಿ ಶವವಾಗಿ ಪತ್ತೆ: ವಿಚಾರಣೆಗೆ ಒಳಪಟ್ಟ ಪತಿ!
ಏಕದಿನ ವಿಶ್ವಕಪ್ ಗೆಲ್ಲಲು ಆರ್‌ಸಿಬಿಯಂತೆ ಪರ್ಫೆಕ್ಟ್‌ ಭಾರತ ತಂಡ ಸೆಲೆಕ್ಟ್ ಮಾಡಿದ ದಿನೇಶ್ ಕಾರ್ತಿಕ್! ಆದ್ರೆ ಗಂಭೀರ್ ಆಪ್ತನಿಗಿಲ್ಲ ಸ್ಥಾನ