ಕಂಠೀರವದಲ್ಲಿ ಫುಟ್ಬಾಲ್‌ ವಿರೋಧಿಸಿ ಪ್ರತಿಭಟನೆ

Published : Sep 07, 2019, 03:49 PM IST
ಕಂಠೀರವದಲ್ಲಿ ಫುಟ್ಬಾಲ್‌ ವಿರೋಧಿಸಿ ಪ್ರತಿಭಟನೆ

ಸಾರಾಂಶ

ಬೆಂಗಳೂರಿನ ಹೃದಯಭಾಗದಲ್ಲಿರುವ ಶ್ರೀ ಕಂಠೀರವ ಸ್ಟೇಡಿಯಂನಲ್ಲಿ ಫುಟ್ಬಾಲ್ ಕ್ರೀಡೆಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ನಗರದ ಟೌನ್‌ ಹಾಲ್‌ ಮುಂದೆ  ನಡೆಸಲಾಯಿತು. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ಬೆಂಗಳೂರು(ಸೆ.07): ಕಂಠೀರವ ಕ್ರೀಡಾಂಗಣವನ್ನು ಫುಟ್ಬಾಲ್‌ ಕ್ರೀಡೆಗೆ ನೀಡಬಾರದು ಎಂದು ಕರ್ನಾಟಕ ಅಥ್ಲೆಟಿಕ್ಸ್‌ ಸಂಸ್ಥೆ ಹಾಗೂ ಜಯ ಕರ್ನಾಟಕ ಸಂಘಟನೆ ಶುಕ್ರವಾರ ಜಂಟಿಯಾಗಿ ಪ್ರತಿಭಟನೆ ನಡೆಸಿತು. ನಗರದ ಟೌನ್‌ ಹಾಲ್‌ ಮುಂದೆ ಬೆಳಗ್ಗೆ 11 ಗಂಟೆಯಿಂದ 11.30ರ ವರೆಗೆ ರಾಜ್ಯ ಸರ್ಕಾರ, ಕ್ರೀಡಾ ಇಲಾಖೆ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಬಳಿಕ ಕ್ರೀಡಾಂಗಣಕ್ಕೆ ಮೆರವಣಿಗೆ ಮೂಲಕ ತೆರಳಿದರು.

ಕಂಠೀ​ರವದಲ್ಲಿ ಫುಟ್ಬಾಲ್‌ ನಡೆ​ಸಿ​ದರೆ ಉಪ​ವಾಸ ಸತ್ಯಾ​ಗ್ರ​ಹ: ಕೆಎಎ ಎಚ್ಚ​ರಿ​ಕೆ!

ಅಂತಾರಾಷ್ಟ್ರೀಯ ಅಥ್ಲೀಟ್‌ಗಳು, ಹಿರಿಯ ಅಥ್ಲೀಟ್‌ಗಳು, ಅಥ್ಲೆಟಿಕ್ಸ್‌ ಸಂಸ್ಥೆ ಪದಾಧಿಕಾರಿಗಳು, ಜಯ ಕರ್ನಾಟಕ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರುಗಳು ಪ್ರತಿಭಟನಾ ಮೆರವಣಿಗೆಯುದ್ದಕ್ಕೂ ಇಲಾಖೆಯ ಭ್ರಷ್ಟಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಸಿಂಥೆಟಿಕ್‌ ಟ್ರ್ಯಾಕ್‌, ಕ್ರೀಡಾಂಗಣದಲ್ಲಿರುವ ಅವ್ಯವಸ್ಥೆಯನ್ನು ಈ ಕೂಡಲೇ ಪರಿಹರಿಸಬೇಕು, ಬಡ ಅಥ್ಲೀಟ್‌ಗಳಿಗೆ ನ್ಯಾಯ ದೊರೆಯುವವರೆಗೂ ಈ ಹೋರಾಟ ನಿಲ್ಲುವುದಿಲ್ಲ. ಹೋರಾಟ ನಿರಂತರವಾಗಿರುತ್ತದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಶ್ರೀ ಕಂಠೀರವ ಕ್ರೀಡಾಂಗಣದ ಮುಖ್ಯ ದ್ವಾರದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಇಲಾಖೆಗೆ ಸಂಬಂಧಪಟ್ಟ ಮೇಲಾಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಎಂದು ಪಟ್ಟು ಹಿಡಿದರು. ಮೇಲಾಧಿಕಾರಿಗಳ ಗೈರು ಹಾಜರಿಯಲ್ಲಿ ಇಲಾಖೆ ಉಪ ನಿರ್ದೇಶಕ ಜಿತೇಂದ್ರ ಶೆಟ್ಟಿ, ಪ್ರತಿಭಟನಾಕಾರರ ಮನವಿ ಪತ್ರವನ್ನು ಪಡೆದರು.

ಪ್ರತಿಭಟನಾಕಾರರ ಮನವಿ ಪತ್ರವನ್ನು ಪಡೆಯಲಾಗಿದೆ. ಈ ಬಗ್ಗೆ ಸರ್ಕಾರ ಹಾಗೂ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು. ಸೂಕ್ತವಾದ ನಿರ್ಣಯವನ್ನು ಸರ್ಕಾರ ಮತ್ತು ಇಲಾಖೆ ಶ್ರೀಘ್ರದಲ್ಲಿ ಕೈಗೊಳ್ಳುವ ವಿಶ್ವಾಸವಿದೆ.

- ಜಿತೇಂದ್ರ ಶೆಟ್ಟಿ, ಕ್ರೀಡಾ ಇಲಾಖೆ ಉಪ ನಿರ್ದೇಶಕ
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ಔಟ್, ಶುಭ್‌ಮನ್ ಗಿಲ್ ಇನ್: ಅಸಲಿ ಸತ್ಯ ಬಿಚ್ಚಿಟ್ಟ ರವಿಚಂದ್ರನ್ ಅಶ್ವಿನ್!
ಮೊದಲ ಸಲ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸಂಬಳ ಕಟ್! ಬಿಸಿಸಿಐ ಮಹತ್ವದ ತೀರ್ಮಾನ?