
ನವದೆಹಲಿ(ಫೆ.16): ಪುಲ್ವಾಮದಲ್ಲಿ CRPF ಯೋಧರ ಮೇಲಿನ ಭಯೋತ್ವಾದಕ ದಾಳಿಯಿಂದ ಭಾರತದಲ್ಲಿ ಸೂತಕದ ಛಾಯೆ ಆವರಿಸಿದೆ. ಜೈಶ್-ಇ-ಮೊಹಮ್ಮದ ಭಯೋತ್ವಾದಕ ಸಂಘಟನೆಯ ದಾಳಿಯಿಂದ 40 CRPFಯೋಧರು ಹುತಾತ್ಮರಾಗಿದ್ದಾರೆ. ಘಟನೆಯನ್ನ ಖಂಡಿಸಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟ್ವೀಟ್ ಮಾಡಿದ್ದರು. ಇಷ್ಟೇ ಅಲ್ಲ RP-SG ಕ್ರೀಡಾಕಾರ್ಯಕ್ರಮವನ್ನೂ ಮುಂದೂಡಿದ್ದಾರೆ.
ಇದನ್ನೂ ಓದಿ: ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಬಲಿಷ್ಠ ಟೀಂ ಇಂಡಿಯಾ ಪ್ರಕಟ!
ಫೆ.15 ರಂದು RP-SG ಭಾರತೀಯ ಕ್ರೀಡಾ ಗೌರವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ಹುತಾತ್ಮ CRPF ಯೋಧರಿಗಾಗಿ RP-SG ಕ್ರೀಡಾಕಾರ್ಯಕ್ರಮವನ್ನು ಫೆ.16ಕ್ಕೆ ಮುಂದೂಡಲಾಗಿದೆ. ಈ ಕುರಿತು ವಿರಾಟ್ ಕೊಹ್ಲಿ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಯೋಧರನ್ನು ಕಳೆದುಕೊಂಡ ನೋವಿನಿಂದ ಕಾರ್ಯಕ್ರಮ ಮುಂದೂಡುವುದಾಗಿ ಕೊಹ್ಲಿ ಹೇಳಿದ್ದಾರೆ.
ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರ ದಾಳಿ: ಉಗ್ರರ ಕೃತ್ಯಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರ ಆಕ್ರೋಶ!
ಪುಲ್ವಾಮದಲ್ಲಿ ನಡೆದ ಭಯೋತ್ವಾದ ದಾಳಿಯಿಂದ 40 CRPF ಜವಾನರ ಹುತಾತ್ಮರಾಗಿದ್ದಾರೆ. ಇದರಲ್ಲಿ ಕರ್ನಾಟಕ CRPF ಯೋಧ ಗುರು ಕೂಡ ಹುತಾತ್ಮರಾಗಿದ್ದಾರೆ. ಇಂದು(ಫೆ.16) ಗುರು ಪಾರ್ಥಿವ ಶರೀರ ಸ್ವಗ್ರಾಮ ಮಂಡ್ಯಗೆ ಆಗಮಿಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.