
ಹೈದರಾಬಾದ್(ಜ.03): ರಿಯೊ ಒಲಿಂಪಿಕ್ಸ್ ಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರಿಗೆ ತೆಲಂಗಾಣ ಸರ್ಕಾರ, ಬಹುಮಾನದ ರೂಪದಲ್ಲಿ 1000 ಚದರ ಅಡಿಯ ನಿವೇಶನವನ್ನು ನೀಡಿದೆ.
ಹೈದರಾಬಾದ್ ಜಿಲ್ಲೆಯ ಶೈಕ್'ಪೇಟ್'ನಲ್ಲಿ ನಿವೇಶನವನ್ನು ಸಿಂಧು ಅವರಿಗೆ ನೀಡಲಾಗಿದೆ. ಶೈಕ್'ಪೇಟ್'ನಲ್ಲಿ ಎರಡು ನಿವೇಶನವನ್ನು ಕಾಯ್ದಿರಿಸಲಾಗಿದ್ದು, ಅದರಲ್ಲಿ ಒಂದನ್ನು ರಾಜ್ಯ ಸರ್ಕಾರದ ಆದೇಶದಂತೆ ಸಿಂಧು ಅವರಿಗೆ ನೀಡಲಾಗಿದೆ ಎಂದು ಇಲ್ಲಿನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ರಿಯೊ ಒಲಿಂಪಿಕ್ಸ್ನಲ್ಲಿ ಮೊದಲ ಬಾರಿಗೆ ಬೆಳ್ಳಿ ಜಯಿಸಿದ ಕೀರ್ತಿ ಸಿಂಧು ಅವರದ್ದಾಗಿದ್ದು, ಫೈನಲ್'ನಲ್ಲಿ ಸ್ಪೇನ್ ಆಟಗಾರ್ತಿ ಕರೋಲಿನಾ ಮರಿನ್ ಎದುರು ಪರಾಭವ ಹೊಂದಿದ ಸಿಂಧು ಬೆಳ್ಳಿ ಗೆದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.