
ನವದೆಹಲಿ(ಸೆ.25): ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಭಾರತದ ಖ್ಯಾತ ಬ್ಯಾಟ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಅವರಿಗೆ ದೇಶದ ಗೌರವಾನ್ವಿತ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಕ್ರೀಡ ಇಲಾಖೆ ನಾಮನಿರ್ದೇಶನ ಮಾಡಿದೆ.
ವಿಶ್ವದ ನಂ.2ನೇ ಆಟಗಾರ್ತಿ ಸಿಂಧು ಅವರು 2016ರ ರಿಯೋ ಒಲಿಂಪಿಕ್ಸ್'ನಲ್ಲಿ ಬೆಳ್ಳಿ ಪದಕ ಜಯಿಸಿದ್ದರು. ಈ ಬಾರಿ ಕ್ರಿಕೆಟರ್ ಎಂ.ಎಸ್.ಧೋನಿ ನಂತರ ಪದ್ಮಭೂಷಣ ಪ್ರಶಸ್ತಿ ನಾಮನಿರ್ದೇಶ ಆಯ್ಕೆಯಾದ 2ನೇ ಕ್ರೀಡಪಟು ಇವರಾಗಿದ್ದಾರೆ. ಸಿಂಧು ಇತ್ತೀಚಿಗಷ್ಟೆ ಕೊರಿಯನ್ ಓಪನ್ ಸೂಪರ್ ಸೀರಿಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. 22 ವರ್ಷದ ಈ ಸಾಧಕಿಗೆ 2015ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.