
ನವದೆಹಲಿ(ಆ.31): ಭಾರತದ ಬ್ಯಾಡ್ಮಿಂಟನ್ ತಾರೆಗಳಾದ ಸೈನಾ ನೆಹ್ವಾಲ್, ಪಿ.ವಿ.ಸಿಂಧು ಹಾಗೂ ಕೆ.ಶ್ರೀಕಾಂತ್ ಅವರನ್ನು ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯಲ್ ಸನ್ಮಾನಿಸಿದರು.
ಸಚಿವರ ಇಲ್ಲಿನ ನಿವಾಸದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮೂವರನ್ನು ಗೌರವಿಸಿದರು. ಇತ್ತೀಚೆಗಷ್ಟೇ ಮುಕ್ತಾಯಗೊಂಡ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್'ಶಿಪ್'ನಲ್ಲಿ ಸಿಂಧು ಬೆಳ್ಳಿ, ಸೈನಾ ಕಂಚು ಗೆದ್ದಿದ್ದರು.
ಇನ್ನು ಇಂಡೋನೇಷ್ಯಾ ಹಾಗೂ ಆಸ್ಟ್ರೇಲಿಯಾ ಓಪನ್ ಚಾಂಪಿಯನ್ ಶ್ರೀಕಾಂತ್ ಕ್ವಾರ್ಟರ್ ಫೈನಲ್'ನಲ್ಲಿ ವಿಶ್ವ ನಂ.1 ಆಟಗಾರ ಕೋರಿಯಾದ ಸಾನ್ ವ್ಯಾನ್ ಹೋ ವಿರುದ್ಧ ಸೋತಿದ್ದರು.
ಇದೇ ವೇಳೆ ಬ್ಯಾಡ್ಮಿಂಟನ್ ಕೋಚ್'ಗಳಾದ ವಿಮಲ್ ಕುಮಾರ್ ಹಾಗೂ ಪುಲ್ಲೇಲಾ ಗೋಪಿಚಂದ್ ಅವರನ್ನೂ ಕ್ರೀಡಾ ಇಲಾಖೆ ಸನ್ಮಾನಿಸಿದೆ. ಸರ್ಕಾರದ ಬೆಂಬಲಕ್ಕೆ ಸೈನಾ, ಸಿಂಧು ಹಾಗೂ ಶ್ರೀಕಾಂತ್ ಧನ್ಯವಾದ ತಿಳಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.