
ದುಬೈ(ಡಿ.13): ದುಬೈ ಸೂಪರ್ ಸೀರೀಸ್ ಫೈನಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ. ಸಿಂಧು ರೋಚಕ ಜಯ ಸಾಧಿಸಿದರೆ, ಭರ್ಜರಿ ಫಾರ್ಮ್'ನಲ್ಲಿದ್ದ ಕಿದಾಂಬಿ ಶ್ರೀಕಾಂತ್ ಮೊದಲ ಸುತ್ತಿನಲ್ಲೇ ಆಘಾತ ಅನುಭವಿಸಿದ್ದಾರೆ.
ಪುರುಷರ ಸಿಂಗಲ್ಸ್ ವಿಭಾಗದಲ್ಲಿ ವಿಶ್ವ ನಂ.1 ಶ್ರೇಯಾಂಕಿತ ಡೆನ್ಮಾರ್ಕ್'ನ ವಿಕ್ಟರ್ ಅಕ್ಸೆಲ್ಸನ್ ವಿರುದ್ಧ ಶ್ರೀಕಾಂತ್ 21-13, 21-17 ನೇರ ಅಂಕಗಳಲ್ಲಿ ಸೋಲುಂಡರು. ಒಂದೇ ವರ್ಷದಲ್ಲಿ ಇಂಡೋನೇಷ್ಯಾ ಓಪನ್, ಆಸ್ಟ್ರೇಲಿಯನ್ ಓಪನ್, ಡೆನ್ಮಾರ್ಕ್ ಓಪನ್ ಹಾಗೂ ಫ್ರೆಂಚ್ ಓಪನ್ ಸೂಪರ್ ಸೀರಿಸ್ ಪ್ರಶಸ್ತಿ ಬಾಚಿಕೊಂಡಿದ್ದ ಶ್ರೀಕಾಂತ್ ಮೊದಲ ಸುತ್ತಿನಲ್ಲೇ ಸೋತು ಟೂರ್ನಿಯಿಂದ ಹೊರಬಿದ್ದರು.
ಇನ್ನು ವಿಶ್ವದ 3ನೇ ಶ್ರೇಯಾಂಕಿತೆ ಸಿಂಧು, ಚೀನಾದ ಹೀ ಬಿಂಗ್'ಜಿಯೊ ವಿರುದ್ಧ 21-11, 16-21, 21-18 ಅಂಕಗಳಿಂದ ರೋಚಕ ಜಯ ದಾಖಲಿಸಿದರು. 63 ನಿಮಿಷ ನಡೆದ ರೋಚಕ ಕಾದಾಟದಲ್ಲಿ ಕೊನೆಗೂ ಸಿಂಧು ಗೆಲುವಿನ ನಗೆ ಬೀರಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.