
ಚೆನ್ನೈ(ಫೆ.18): ಆಫ್-ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರ ಸಾಧನೆ ಮತ್ತು ಆಟದ ಮೇಲಿನ ಅವರ ಸಮರ್ಪಣಾ ಮನೋಭಾವ ಇಂದಿನ ಯುವಕರಿಗೆ ಮಾದರಿಯಾದುದು ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ವಿಕೆಟ್ ಕೀಪರ್ ಸಯ್ಯದ್ ಕಿರ್ಮಾನಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅಶ್ವಿನ್ಗೆ ‘ಐಕಾನ್ ಆಫ್ ಚೆನ್ನೈ’ ಪ್ರಶಸ್ತಿ ವಿತರಿಸಿದ ಅವರು, ‘ಅಶ್ವಿನ್ ಮಾಡಿರುವ ಸಾಧನೆಗಳನ್ನು ಬಣ್ಣಿಸಲು ಪದಗಳೇ ಸಿಗುತ್ತಿಲ್ಲ. ಅವರಿಗೆ ಹೃದಯಪೂರ್ವಕವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಅಶ್ವಿನ್, ತಮಿಳುನಾಡು ಹಾಗೂ ಭಾರತದ ಹೆಮ್ಮೆ. ಅಶ್ವಿನ್ ಅವರನ್ನು ಗೌರವಿಸಿದ್ದು ಅತ್ಯಂತ ಹೆಮ್ಮೆಯ ಸಂಗತಿ’ ಎಂದು ಕಿರ್ಮಾನಿ ಹೇಳಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.