ಬಿಎಫ್'ಸಿ ರಾಯಭಾರಿಯಾಗಿ ರಾಹುಲ್ ದ್ರಾವಿಡ್ ನೇಮಕ

Published : Nov 15, 2017, 02:40 PM ISTUpdated : Apr 11, 2018, 12:48 PM IST
ಬಿಎಫ್'ಸಿ ರಾಯಭಾರಿಯಾಗಿ ರಾಹುಲ್ ದ್ರಾವಿಡ್ ನೇಮಕ

ಸಾರಾಂಶ

ಬಿಎಫ್‌'ಸಿ ತಂಡಕ್ಕೆ ರಾಯಭಾರಿಯಾಗಿರುವುದು ಸಂತಸ ತಂದಿದೆ. ‘ನಾನು ಬೆಂಗಳೂರು ಹುಡುಗ’ ಹೀಗಾಗಿ ನನ್ನನ್ನು ರಾಯಭಾರಿಯನ್ನಾಗಿ ನೇಮಿಸಿದ್ದಾರೆ ಎಂದು ದ್ರಾವಿಡ್ ಹೇಳಿದ್ದಾರೆ.

ಬೆಂಗಳೂರು(ನ.15): ಭಾರತದ ಮಾಜಿ ಕ್ರಿಕೆಟಿಗ ಮತ್ತು ಕಿರಿಯರ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರನ್ನು ಬೆಂಗಳೂರು ಎಫ್‌'ಸಿ, ಮುಂಬರುವ ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್) ಫುಟ್ಬಾಲ್ ಟೂರ್ನಿಗಾಗಿ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿದೆ.

ಬಿಎಫ್‌'ಸಿ ತಂಡಕ್ಕೆ ರಾಯಭಾರಿಯಾಗಿರುವುದು ಸಂತಸ ತಂದಿದೆ. ‘ನಾನು ಬೆಂಗಳೂರು ಹುಡುಗ’ ಹೀಗಾಗಿ ನನ್ನನ್ನು ರಾಯಭಾರಿಯನ್ನಾಗಿ ನೇಮಿಸಿದ್ದಾರೆ ಎಂದು ದ್ರಾವಿಡ್ ಹೇಳಿದ್ದಾರೆ.

‘ಬಿಎಫ್‌ಸಿ ತಂಡಕ್ಕೆ ಸಿಕ್ಕಿರುವ ಪ್ರತಿಕ್ರಿಯೆ ಅದ್ಭುತವಾಗಿದೆ. ತಂಡ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದೆ’ ಎಂದು ದ್ರಾವಿಡ್ ಹೇಳಿದ್ದಾರೆ.

ನವೆಂಬರ್ 17ರಿಂದ ಐಎಸ್‌'ಎಲ್ ಟೂರ್ನಿ ಆರಂಭಗೊಳ್ಳಲಿದ್ದು, 19ರಂದು ತವರಿನಲ್ಲಿ ಬಿಎಫ್‌'ಸಿ ತನ್ನ ಅಭಿಯಾನ ಆರಂಭಿಸಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

RCB ಇವತ್ತು ರೆಡ್ ಜೆರ್ಸಿ ಬಿಟ್ಟು ಗ್ರೀನ್ ಜೆರ್ಸಿ ತೊಟ್ಟು ಕಣಕ್ಕಿಳಿದಿದ್ದೇಕೆ? ಗ್ರೀನ್ ಜೆರ್ಸಿ ಸ್ಪೆಷಾಲಿಟಿ ಏನು ಗೊತ್ತಾ?
ಆಗ ಬಾಲಿವುಡ್​ ನಟಿ, ಈಗ ಜರ್ಮನ್​ ಬ್ಯೂಟಿ: ವಿರಾಟ್​ ಕೊಹ್ಲಿ ರಾತ್ರಿಯ 'Like' ಸೃಷ್ಟಿಸಿದೆ ಹಲ್​ಚಲ್​