
ಮುಂಬೈ[ಏ.30]: ಭಾರತ ಕಿರಿಯರ ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಹೆಸರನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ಶಿಫಾರಸು ಮಾಡಿರುವ ಸುಪ್ರೀಂಕೋರ್ಟ್ ನೇಮಿತ ಬಿಸಿಸಿಐನ ಆಡಳಿತ ಮಂಡಳಿ ಕ್ರಮಕ್ಕೆ ಬಿಸಿಸಿಐನ ಕೆಲ ಅಧಿಕಾರಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.
‘ಓರ್ವ ಕ್ರಿಕೆಟಿಗನಾಗಿ ಹಾಗೂ ಅಂಡರ್-19 ಮತ್ತು ಭಾರತ ‘ಎ’ ತಂಡದ ಕೋಚ್ ಆಗಿ ದ್ರಾವಿಡ್ ಸೇವೆ ಅಮೂಲ್ಯ. ಆದರೆ, ಸಾಮಾನ್ಯವಾಗಿ ಕಿರಿಯ ಆಟಗಾರರು ವೈಯಕ್ತಿಕ ಕೋಚ್ಗಳನ್ನು ಹೊಂದಿರುತ್ತಾರೆ. ಆಟಗಾರರು ಅಂಡರ್-14, 16, 19 ತಂಡವನ್ನು ಪ್ರತಿನಿಧಿಸುವಲ್ಲಿ ವೈಯಕ್ತಿಕ ಕೋಚ್'ಗಳ ಪಾತ್ರ ಮಹತ್ವವಾದುದು. ಈ ದೃಷ್ಟಿಯಿಂದ ದ್ರಾವಿಡ್ ಹೆಸರನ್ನು ದ್ರೋಣಾಚಾರ್ಯಕ್ಕೆ ಶಿಫಾರಸು ಮಾಡಿರುವುದು ಸೂಕ್ತವಲ್ಲ’ ಎಂದಿದ್ದಾರೆ.ಐಪಿಎಲ್’ನಲ್ಲಿ 2014ರಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದ ದ್ರಾವಿಡ್, 2015ರಲ್ಲಿ ಭಾರತ ಎ ಹಾಗೂ ಅಂಡರ್-19 ತಂಡದ ಕೋಚ್ ಆಗಿ ನೇಮಕಗೊಂಡಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.