ಅಂಡರ್-19 ವಿಶ್ವಕಪ್: ಬಿಸಿಸಿಐ ಬಹುಮಾನದ ಬಗ್ಗೆ ದ್ರಾವಿಡ್ ಅಸಮಾಧಾನ..!

Published : Feb 07, 2018, 12:50 PM ISTUpdated : Apr 11, 2018, 01:11 PM IST
ಅಂಡರ್-19 ವಿಶ್ವಕಪ್: ಬಿಸಿಸಿಐ ಬಹುಮಾನದ ಬಗ್ಗೆ ದ್ರಾವಿಡ್ ಅಸಮಾಧಾನ..!

ಸಾರಾಂಶ

ಇತ್ತೀಚೆಗಷ್ಟೇ ನ್ಯೂಜಿಲೆಂಡ್'ನಲ್ಲಿ ನಡೆದ ಅಡರ್-19 ವಿಶ್ವಕಪ್ ಟೂರ್ನಿಯಲ್ಲಿ ಪೃಥ್ವಿ ಶಾ ನೇತೃತ್ವದ ಕಿರಿಯರ ಟೀಂ ಇಂಡಿಯಾದ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ನಾಲ್ಕನೇ ಬಾರಿಗೆ ಅಂಡರ್ 19 ವಿಶ್ವಕಪ್ ಜಯಿಸಿದೆ.

ಮುಂಬೈ(ಫೆ.07): ಆಟಗಾರರು, ಕೋಚ್, ಸಹಾಯಕ ಸಿಬ್ಬಂದಿ ಪ್ರತಿಯೊಬ್ಬರಿಗೂ ಬಿಸಿಸಿಐ ಸಮಾನವಾಗಿ ಬಹುಮಾನ ನೀಡಬೇಕು. ಸಹಾಯಕ ಸಿಬ್ಬಂದಿಗೆ ಕಡಿಮೆ ಬಹುಮಾನದ ಮೊತ್ತ ನೀಡುವುದು ಸರಿಯಲ್ಲ ಎಂದು ಭಾರತ ಕಿರಿಯರ ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಬೇಸರ ವ್ಯಕ್ತಪಡಿಸಿದ್ದಾರೆ.

ಭಾರತ ಕಿರಿಯರ ತಂಡದ ಅಂಡರ್-19 ವಿಶ್ವಕಪ್ ಗೆಲ್ಲುತ್ತಿದ್ದಂತೆ ಕೋಚ್ ದ್ರಾವಿಡ್‌'ಗೆ ₹50 ಲಕ್ಷ, ಆಟಗಾರರಿಗೆ ತಲಾ ₹30 ಲಕ್ಷ ಹಾಗೂ ಸಹಾಯಕ ಸಿಬ್ಬಂದಿಗೆ ತಲಾ ₹20 ಲಕ್ಷ ನಗದು ಬಹುಮಾನವನ್ನು ಬಿಸಿಸಿಐ ಘೋಷಿಸಿತ್ತು. ಬಿಸಿಸಿಐನ ಈ ನಡೆಯನ್ನು ಪ್ರಶ್ನಿಸಿರುವ ದ್ರಾವಿಡ್, ‘ಪ್ರತಿಯೊಬ್ಬ ಸಿಬ್ಬಂದಿಯ ಬೆಂಬಲ ತಂಡದ ಜಯಕ್ಕೆ ಕಾರಣ’ ಎಂದು ದ್ರಾವಿಡ್ ಹೇಳಿದ್ದಾರೆ.

ಇತ್ತೀಚೆಗಷ್ಟೇ ನ್ಯೂಜಿಲೆಂಡ್'ನಲ್ಲಿ ನಡೆದ ಅಡರ್-19 ವಿಶ್ವಕಪ್ ಟೂರ್ನಿಯಲ್ಲಿ ಪೃಥ್ವಿ ಶಾ ನೇತೃತ್ವದ ಕಿರಿಯರ ಟೀಂ ಇಂಡಿಯಾದ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ನಾಲ್ಕನೇ ಬಾರಿಗೆ ಅಂಡರ್ 19 ವಿಶ್ವಕಪ್ ಜಯಿಸಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?