
ನವದೆಹಲಿ(ಜು.22): ತನ್ನಿಷ್ಟದಂತೆ ಕೋಚ್'ಗಳನ್ನು ಕೊಹ್ಲಿಗೆ ಮತ್ತೊಂದು ಆರಂಭದಲ್ಲಿಯೇ ವಿಘ್ನ ಎದುರಾಗಿದೆ. ವಿದೇಶದ ಪ್ರವಾಸಗಳಿಗೆ ಬ್ಯಾಟಿಂಗ್ ಸಲಹೆಗಾರರಾಗಿ ನೇಮಕವಾದ ರಾಹುಲ್ ದ್ರಾವಿಡ್ ಅವರು ಜು.26 ರಂದು ಆರಂಭವಾಗುವ ಭಾರತ ಪ್ರವಾಸಕ್ಕೆ ತೆರಳುತ್ತಿಲ್ಲ. ಪ್ರಸ್ತುತ ಭಾರತ ಎ ಹಾಗೂ ಅಂಡರ್ 19 ತಂಡಗಳೊಂದಿಗೆ ಹೆಚ್ಚು ಸಂಪರ್ಕದಲ್ಲಿರುವುದರಿಂದ ಟೀಂ ಇಂಡಿಯಾದೊಂದಿಗೆ ಹೋಗುತ್ತಿಲ್ಲ ಎಂದು ಬಿಸಿಸಿಐ ಆಡಳಿತಾಧಿಕಾರಿ ಸಮಿತಿಯ ಮುಖ್ಯಸ್ಥ ವಿನೋದ್ ರಾಯ್ ತಿಳಿಸಿದ್ದಾರೆ.
ಮುಂದಿನ ವರ್ಷ 19 ವರ್ಷದೊಳಗಿನ ವಿಶ್ವಕಪ್ ನಡೆಯಲಿದೆ. ಅವರನ್ನು ಪೂರ್ಣವಧಿಯಾಗಿ ಭಾರತ ಎ ಹಾಗೂ ಅಂಡರ್ 19 ತಂಡಗಳ ಕೋಚ್ ಆಗಿ ನೇಮಿಸಲಾಗಿದೆ. ಈ ಸಂದರ್ಭದಲ್ಲಿ ಜಾಹೀರ್ ಖಾನ್ ಬಗ್ಗೆಯೂ ಪ್ರಸ್ತಾಪಿಸಿದ ಅವರು 'ಜಾಹೀರ್ ಐಪಿಎಲ್ ತಂಡ ಡೆಲ್ಲಿ ಡೇರ್'ಡೇವಿಲ್ಸ್'ನ ನಾಯಕರಾಗಿರುವ ಕಾರಣ ಟೀಂ ಇಂಡಿಯಾಕ್ಕೆ ಪೂರ್ಣಾವಧಿ ಬೌಲಿಂಗ್ ಸಲಹೆಗಾರರಾಗಿ ನೇಮಕ ಮಾಡಲು ಸಾಧ್ಯವಾಗಲಿಲ್ಲ' ಈ ಬಗ್ಗೆ ಅವರು ಸಹ ತಿಳಿಸಿದ್ದರು ಎಂದು ವಿನೋದ್ ರಾಯ್ ಹೇಳಿದ್ದಾರೆ .
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.