INDvWI 3ನೇ ಏಕದಿನ ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿ!

Published : Aug 14, 2019, 09:46 PM IST
INDvWI 3ನೇ ಏಕದಿನ ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿ!

ಸಾರಾಂಶ

ಭಾರತ ಹಾಗೂ  ವೆಸ್ಟ್ ಇಂಡೀಸ್ ನಡುವಿನ 3ನೇ ಏಕದಿನ ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿಯಾಗಿದೆ. ಇದೀಗ 2ನೇ ಬಾರಿ ಪಂದ್ಯ ತಾತ್ಕಾಲಿಕ ಸ್ಥಗಿತಗೊಂಡಿದೆ.

ಟ್ರಿನಿಡಾಡ್(ಆ.14): ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ 3ನೇ ಹಾಗೂ ಅಂತಿಮ ಏಕದಿನ ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿಯಾಗಿದೆ. ಆರಂಭಿಕ ಹಂತದಲ್ಲಿ ಮಳೆಯಿಂದಾಗಿ ಪಂದ್ಯ ತಾತ್ಕಾಲಿಕ ಸ್ಥಗಿತಗೊಂಡಿತ್ತು. 1.3 ಓವರ್‌ಗಳಲ್ಲಿ ವೆಸ್ಟ್ ಇಂಡೀಸ್ 8 ರನ್ ಸಿಡಿಸಿದಾಗ ಪಂದ್ಯ ಸ್ಥಗಿತಗೊಂಡಿತ್ತು. ಆದರೆ ಕೆಲ ಹೊತ್ತಲ್ಲೇ ಪಂದ್ಯ ಮತ್ತೆ ಆರಂಭವಾಗಿತ್ತು. ಇದೀಗ 2ನೇ ಬಾರಿಗೆ ಪಂದ್ಯ ತಾತ್ಕಾಲಿಕ ಸ್ಥಗಿತಗೊಂಡಿದೆ.

ಇದನ್ನೂ ಓದಿ: ಅಂತಿಮ ಪಂದ್ಯದಲ್ಲಿ ಗೇಲ್ ಅಬ್ಬರ; ಶುಭಕೋರಿದ ಕೊಹ್ಲಿ ಬಾಯ್ಸ್!

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ವಿಂಡೀಸ್ ಉತ್ತಮ ಆರಂಭ ಪಡೆಯಿತು. ಕ್ರಿಸ್ ಗೇಲ್ ಹಾಗೂ ಇವಿನ್ ಲಿವಿಸ್ ಮೊದಲ ವಿಕೆಟ್‍‌‌ಗೆ 115 ರನ್ ಜೊತೆಯಾಟ ನೀಡಿತು. ಲಿವಿಸ್ 43 ರನ್ ಸಿಡಿಸಿ ಔಟಾದರು. ಆದರೆ ಅಬ್ಬರಿಸಿದ ಗೇಲ್ ಹಾಫ್ ಸೆಂಚುರಿ ಸಿಡಿಸಿದರು. ಗೇಲ್ 41 ಎಸೆತದಲ್ಲಿ 72 ರನ್ ಚಚ್ಚಿದರು. ಇದು ಕ್ರಿಸ್ ಗೇಲ್ ಕೊನೆಯ ಏಕದಿನ ಪಂದ್ಯ ಎಂದೇ ಬಿಂಬಿತವಾಗಿದೆ. ಶೈ ಹೋಪ್ ಹಾಗೂ ಶಿಮ್ರೊನ್ ಹೆಟ್ಮೆಯರ್ ಇನ್ನಿಂಗ್ಸ್ ಮುಂದುವರಿಸುತ್ತಿದ್ದಂತೆ ಮತ್ತೆ ಮಳೆ ಅಡ್ಡಿಯಾಗಿದೆ.

ಇದನ್ನೂ ಓದಿ: INDvWI 3ನೇ ಏಕದಿನ: ಮಹತ್ವದ ಪಂದ್ಯ ತಾತ್ಕಾಲಿಕ ಸ್ಥಗಿತ! 

ವೆಸ್ಟ್ ಇಂಡೀಸ್ 22 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 158 ರನ್ ಸಿಡಿಸಿದೆ. ಈ ವೇಳೆ ಸುರಿದ ಮಳೆಯಿಂದ ಪಂದ್ಯ ತಾತ್ಕಾಲಿಕ ಸ್ಥಗಿತಗೊಂಡಿದೆ

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?