
ನವದೆಹಲಿ(ಡಿ.31): 2 ವರ್ಷಗಳ ನಿಷೇಧದ ಬಳಿಕ ಐಪಿಎಲ್'ಗೆ ವಾಪಸಾಗುತ್ತಿರುವ ರಾಜಸ್ಥಾನ ರಾಯಲ್ಸ್, 11ನೇ ಆವೃತ್ತಿಗೆ ಸ್ಟೀವ್ ಸ್ಮಿತ್, ರಹಾನೆಯನ್ನು ಉಳಿಸಿಕೊಳ್ಳದಿರಲು ನಿರ್ಧರಿಸಿದೆ ಎನ್ನಲಾಗಿದೆ.
8ನೇ ಆವೃತ್ತಿಯಲ್ಲಿ ತನ್ನ ತಂಡದಲ್ಲಿದ್ದ ಆಟಗಾರರನ್ನು ಈ ಬಾರಿ ಉಳಿಸಿಕೊಳ್ಳುವ ಅವಕಾಶವಿದೆ. ಹರಾಜಿಗೂ ಮುನ್ನ ಯಾವ ಆಟಗಾರರನ್ನೂ ಉಳಿಸಿಕೊಳ್ಳದಿದ್ದರೂ, ಹರಾಜಿನಲ್ಲಿ ತಂಡ ‘ರೈಟ್ ಟು ಮ್ಯಾಚ್’ ಕಾರ್ಡ್ ಬಳಕೆ ಮಾಡಿ ಸ್ಮಿತ್, ರಹಾನೆಯನ್ನು ಖರೀದಿಸಲು ಚಿಂತನೆ ನಡೆಸಿದೆ.
ಹರಾಜಿಗೂ ಮುನ್ನ ಉಳಿಸಿಕೊಂಡರೆ, ಆಟಗಾರರಿಗೆ ಹೆಚ್ಚಿನ ಸಂಭಾವನೆ ನೀಡಬೇಕಾಗುತ್ತದೆ. ಆದರೆ ಹರಾಜಿನಲ್ಲಿ ಆಟಗಾರರು ಎಷ್ಟು ಮೊತ್ತಕ್ಕೆ ಬಿಕರಿಯಾಗುತ್ತಾರೆ ಎಂಬುದನ್ನು ನೋಡಿಕೊಂಡು, ತಂಡಕ್ಕೆ ಸೇರಿಸಿಕೊಳ್ಳುವ ಕುರಿತು ನಿರ್ಧರಿಸಲಾಗುತ್ತದೆ ಎನ್ನಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.