
ಬೆಂಗಳೂರು(ಜೂನ್.14): ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯಕ್ಕೆ ಕೇಂದ್ರ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಚಾಲನೆ ನೀಡಿದ್ದಾರೆ. ಈ ಮೂಲಕ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಐತಿಹಾಸಿಕ ಟೆಸ್ಟ್ ಪಂದ್ಯಕ್ಕೆ ಸಾಕ್ಷಿಯಾಗಿದೆ.
ಟೆಸ್ಟ್ ಪಂದ್ಯದ ಆರಂಭದಲ್ಲಿ ಭಾರತ ಹಾಗೂ ಅಫ್ಘಾನಿಸ್ತಾನ ತಂಡದ ಆಟಗಾರರನ್ನ ರಾಥೋಡ್ ಅಭಿನಂದಿಸಿದರು. ರಾಥೋಡ್ ಜೊತೆ ಅಫ್ಘಾನಿಸ್ತಾನದ ಮುಖ್ಯ ಕಾರ್ದರ್ಶಿ ಅಬ್ದುಲ್ಲಾ ಅಬ್ದುಲ್ಲಾ ಕೂಡ ಹಾಜರಿದ್ದರು.
ವಿಶೇಷ ಅಂದರೆ ಟೀಮ್ಇಂಡಿಯಾ ಮಾಜಿ ಕ್ರಿಕೆಟಿಗ. ಅಫ್ಘಾನಿಸ್ತಾನದಲ್ಲಿ ಹುಟ್ಟಿ ಭಾರತ ಪರ ಆಡಿದ ಸಲೀಮ್ ದುರಾನಿ ಉಪಸ್ಥಿತರಿದ್ದರು. ಈ ಮೂಲಕ ಭಾರತ ಹಾಗೂ ಅಪ್ಘಾನಿಸ್ತಾನ ನಡುವಿನ ಐತಿಹಾಸಿಕ ಟೆಸ್ಟ್ ಪಂದ್ಯ ಆರಂಭಗೊಂಡಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.