
ಕೊಲಂಬೊ(ಆ.08): ಈಗಾಗಲೇ ಭಾರತದ ವಿರುದ್ಧ 0-2 ಅಂತರದಲ್ಲಿ ಸರಣಿ ಕೈಚೆಲ್ಲಿರುವ ಶ್ರೀಲಂಕಾಗೆ ಇದೀಗ ಮತ್ತೊಂದು ಶಾಕ್ ಎದುರಾಗದೆ.
ಶ್ರೀಲಂಕಾ ತಂಡದ ಪ್ರಮುಖ ಸ್ಪಿನ್ನರ್ ರಂಗನಾ ಹೆರಾತ್ ಬೆನ್ನು ನೋವಿಗೆ ಒಳಗಾಗಿದ್ದು, ಪಲ್ಲೆಕಲ್ಲೆ ಟೆಸ್ಟ್'ನಿಂದ ಹೊರಬಿದ್ದಿದ್ದಾರೆ. ಆಗಸ್ಟ್ 12ರಿಂದ 16ರವರೆಗೆ ನಡೆಯಲಿರುವ ಮೂರನೇ ಹಾಗೂ ಅಂತಿಮ ಟೆಸ್ಟ್'ನಲ್ಲಿ ಹೆರಾತ್ ಕಾಣಿಸಿಕೊಳ್ಳುತ್ತಿಲ್ಲ.
ದಿನೇಶ್ ಚಾಂಡಿಮಲ್ ಅನುಪಸ್ಥಿತಿಯಲ್ಲಿ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಹೆರಾತ್ ಮುನ್ನಡೆಸಿದ್ದರು.
ಈಗಾಗಲೇ ಗಾಯದ ಸಮಸ್ಯೆಯಿಂದಾಗಿ ಲಂಕಾ ತಂಡದಿಂದ ಆಲ್ರೌಂಡರ್ ಅಸೆಲಾ ಗುಣರತ್ನೆ ಹಾಗೂ ನುವಾನ್ ಪ್ರದೀಪ್ ಹೊರಬಿದ್ದಿದ್ದು ಲಂಕಾ ತಂಡಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.